25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

ನಿಡ್ಲೆ: ಪಿಲಿಕಜೆ ಬೈಲುವಾರು ಸಮಿತಿಯ ವತಿಯಿಂದ ಇತ್ತೀಚೆಗೆ ಶ್ರಮದಾನ ನಡೆಯಿತು. ಪ್ರತಿವರ್ಷದಂತೆ 7ನೇ ವರ್ಷದ ಶ್ರಮದಾನವು ನಿಡ್ಲೆ ರಾಜ್ಯ ಹೆದ್ದಾರಿಯಿಂದ ಪಟ್ರಮೆ ಜಿ.ಪಂ ರಸ್ತೆಯ 2 ಬದಿಯ ಗಿಡಗಂಟಿ ಕಡಿದು ಪ್ರಯಾಣಿಕರ ಹಾಗೂ ಶಾಲಾ ಮಕ್ಕಳಿಗೆ ಅನುಕೂಲ ಮಾಡಿದರು.

ಡಾಂಬರು ರಸ್ತೆ ಅಲ್ಲಲ್ಲಿ, ದೊಡ್ಡದಾದ ಹೊಂಡಗಳಿಗೆ ಮಣ್ಣು ಹಾಕಿ ಸಮತಟ್ಟಗೊಳಿಸಲಾಯಿತು. ಕಳೆಕೊಚ್ಚುವ ಯಂತ್ರವನ್ನು ಲಕ್ಷ್ಮಣ ಗೌಡ ನಂಜಿಲ, ಕೃಷ್ಣಪ್ರಸಾದ್ ಐತೂರು, ಪದ್ಮನಾಭ ನಕ್ಕರೆ ಪದ್ಮಯ್ಯಗೌಡ ಪಿಲಿಕಜೆ, ಪೂವಪ್ಪ ಗೌಡ ಪರಾಂಡ, ಚೀಂಕ್ರ ಮಾಪಲಾಜೆ, ಬೆಳಗಿನ ಉಪಹಾರವನ್ನು ರಾಜೇಶ್ ಉಳ್ಳಾಲ್ತಿ ಚಿಕನ್ ಸೆಂಟರ್ ನಿಡ್ಲೆ ಹಾಗೂ ಪಿಕಪ್ ವ್ಯವಸ್ಥೆಯನ್ನು ಜಿತೇಂದ್ರ ಶೆಟ್ಟಿ, ಪೆಟ್ರೋಲ್ ವ್ಯವಸ್ಥೆಯನ್ನು ಯಾದವ್ ಸಣಿಲ, ಊಟದ ವ್ಯವಸ್ಥೆಯನ್ನು ಅಧ್ಯಕ್ಷರಾದ ಹೊನ್ನಪ್ಪಗೌಡ ಹಿರಿಂಬಿ, ತಂಪು ಪಾನೀಯ ವ್ಯವಸ್ಥೆಯನ್ನು ನಾರಾಯಣ ಮಾಪಲಾಜೆ, ಜಯಪ್ರಸಾದ್ ಪರಾಂಡ, ಗೋವಿಂದಗೌಡ, ಶಂಕರಡ್ಡ, ಪುಷ್ಪರಾಜ್ ಪಿಲಿಕಜೆ, ವಸಂತ ಶಂಕರಡ್ಡ ಇವರೆಲ್ಲರು ಕೊಟ್ಟು ಸಹಕರಿಸಿದರು.

ರಾಮಣ್ಣ ಗೌಡ ಹೊಸಮನೆ ಪೆರ್ಲೆ ಹಾಗೂ ಚಿದಾನಂದ ಶೆಟ್ಟಿ ಸಹಕರಿಸಿದರು. ಪಿಲಿಕಜೆ ಬೈಲುವಾರು ಸಮಿತಿಯ ಕಾರ್ಯದರ್ಶಿಯರಾದ ಅಶೋಕ ಪಿಲಿಕಜೆ ಧನ್ಯವಾದ ಸಲ್ಲಿಸಿದರು.

Related posts

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!