ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಬೆಳಾಲು: ಮಾಯ ಫ್ರೆಂಡ್ಸ್ ಮಾಯ ಬೆಳಾಲು ವತಿಯಿಂದ ಜರಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳಿಗಾಗಿ ಕಬಡ್ಡಿ ಪಂದ್ಯಾಟವು ಬೆಳಾಲಿನ ಮಾಯ ಶ್ರೀ ಮಹದೇವ ದೇವಸ್ಥಾನದ ಮೈದಾನದಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮಕ್ಕಳ ತಂಡವು ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿತು.

ಪ್ರಶಸ್ತಿಯನ್ನು ಮಾಜಿ ಸಚಿವರಾದ ಗಂಗಾಧರ ಗೌಡ, ಮಾಯ ಮಹದೇವ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಚ್ ಪದ್ಮ ಗೌಡ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಊರ ಗಣ್ಯರಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಸುರುಳಿ, ಪಂಚಾಯತ್ತಿನ ಸದಸ್ಯರಾದ ದಿನೇಶ್ ಕೋಟ್ಯಾನ್, ಸದಸ್ಯರಾದ ಪ್ರವೀಣ್ ವಿಜಯ್ ಮೊದಲಾದ ಗಣ್ಯರಿಂದ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿ ಮತ್ತು ಕಬಡ್ಡಿ ತರಬೇತುದಾರರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರು ಉಪಸ್ಥಿತರಿದ್ದರು.

Leave a Comment

error: Content is protected !!