September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

ಬೆಳಾಲು: ಮಾಯ ಫ್ರೆಂಡ್ಸ್ ಮಾಯ ಬೆಳಾಲು ವತಿಯಿಂದ ಜರಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳಿಗಾಗಿ ಕಬಡ್ಡಿ ಪಂದ್ಯಾಟವು ಬೆಳಾಲಿನ ಮಾಯ ಶ್ರೀ ಮಹದೇವ ದೇವಸ್ಥಾನದ ಮೈದಾನದಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮಕ್ಕಳ ತಂಡವು ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿತು.

ಪ್ರಶಸ್ತಿಯನ್ನು ಮಾಜಿ ಸಚಿವರಾದ ಗಂಗಾಧರ ಗೌಡ, ಮಾಯ ಮಹದೇವ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಚ್ ಪದ್ಮ ಗೌಡ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಊರ ಗಣ್ಯರಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಸುರುಳಿ, ಪಂಚಾಯತ್ತಿನ ಸದಸ್ಯರಾದ ದಿನೇಶ್ ಕೋಟ್ಯಾನ್, ಸದಸ್ಯರಾದ ಪ್ರವೀಣ್ ವಿಜಯ್ ಮೊದಲಾದ ಗಣ್ಯರಿಂದ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿ ಮತ್ತು ಕಬಡ್ಡಿ ತರಬೇತುದಾರರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರು ಉಪಸ್ಥಿತರಿದ್ದರು.

Related posts

ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಗದೀಶ್ ಕನ್ನಾಜೆಯವರಿಂದ ಸಮವಸ್ತ್ರ ವಿತರಣೆ

Suddi Udaya

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!