April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

ಉಜಿರೆ: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ.19 ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಾನಪದ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾಕ್ಟರ್ ರವೀಶ್ ಪಡುಮಲೆ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.

ತುಳುನಾಡಿನ ದೈವಾರಾಧನೆಯ ನರ್ತನ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮೂಲ ಪದ್ದತಿಗೆ ಮೌಲ್ಯವನ್ನು ಕೊಟ್ಟು, ಅದನ್ನು ಉಳಿಸಿ ಬೆಳೆಸುತ್ತಾ ಬರುವ ರವೀಶ್ ರವರು ದೈವನರ್ತಕ ಸಮುದಾಯದಲ್ಲಿ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಡಾಕ್ಟರೇಟ್ ಪಡೆದ ಮೊದಲ ದೈವನರ್ತಕರಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಚಯಿಸುವ ಸಲುವಾಗಿ ಆಯೋಜಿಸಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಹಲವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಪಂಚಾಯತ್ , ಸದಸ್ಯರುಗಳು ಮತ್ತು ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Related posts

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!