25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

Suddi Udaya

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya
error: Content is protected !!