23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಜು.18ರಂದು ರಜೆ ಎಂದು ನಕಲಿ ರಜೆ ಆದೇಶ: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್-ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!