22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪಟ್ರಮೆ: ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ವಾಪಾಸು ಬರುತ್ತಿದ್ದ ಸಮಯ ನೆಲಕ್ಕೆ ಹಾಸಿದ ಟೈಲ್ಸ್‌ನಲ್ಲಿ ಕಾಲಿಗ ಹಾಕಿದ ಚಪ್ಪಲಿಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಆಯ ತಪ್ಪಿ ಟೈಲ್ಸ್ ನೆಲದ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಡಿ.20 ರಂದು ಪಟ್ರಮೆಯಲ್ಲಿ ನಡೆದಿದೆ.


ಪಟ್ರಮೆ ಗ್ರಾಮದ ದೇರಾಜೆ ಮನೆ ಗುರುವ (47 ವರ್ಷ) ಈ ಘಟನೆಯಲ್ಲಿ ಮೃತಪಟ್ಟವರು. ಈ ಬಗ್ಗೆ ಬಾಬು ಎಂಬವರು ಧರ್ಮಸ್ಥಳ ಠಾಣೆಗೆ ದೂರು ನೀಡಿ, ತನ್ನ ಚಿಕ್ಕಪ್ಪ ಗುರುವ ಎಂಬವರು ಡಿ. 19 ರಂದು ರಾತ್ರಿ ಪಟ್ರಮೆ ಗ್ರಾಮದ ಕುತ್ಯಾಡಿ ಎಂಬಲ್ಲಿ ರವೀಂದ್ರನಾಥ ಶೆಟ್ಟಿಯವರ ಹೊಸದಾಗಿ ನಿರ್ಮಾಣವಾಗುತ್ತಿರುವ ಮನೆಯ ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ವಾಪಾಸು ಒಳ ಮನೆಯ ಒಳಗಿನಿಂದ ಬರುತ್ತಿದ್ದ ಸಮಯ ಅವರು ಧರಿಸಿದ್ದ ಚಪ್ಪಲಿಯು ನೆಲಕ್ಕೆ ಹಾಸಿದ ಟೈಲ್ಸ್ ನಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಟೈಲ್ಸ್ ನೆಲದ ಮೇಲೆ ಹಿಂದಕ್ಕೆ ಬಿದ್ದು, ಹಿಂಬದಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು, ರವೀಂದ್ರನಾಥ ಶೆಟ್ಟಿ ಮತ್ತು ಅವರ ಮನೆಯವರು ಆರೈಕೆ ಮಾಡಿ ವಿಚಾರವನ್ನು ಅವರು ಪತ್ನಿ ಲಲಿತಾರವರಿಗೆ ತಿಳಿಸಿ ಅವರ ಜೊತೆ ಚಿಕಿತ್ಸೆ ಬಗ್ಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿನ ವೈದ್ಯರು ಪರೀಕ್ಷಿಸಿ ಸೂಚಿಸಿದಂತೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡು ಚಿಕಿತ್ಸೆಯಲ್ಲಿದ್ದವರು ಡಿ.20 ರಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ದೂರು ನೀಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ: 86/2023 ಕಲಂ:174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
error: Content is protected !!