September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪಟ್ರಮೆ: ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ವಾಪಾಸು ಬರುತ್ತಿದ್ದ ಸಮಯ ನೆಲಕ್ಕೆ ಹಾಸಿದ ಟೈಲ್ಸ್‌ನಲ್ಲಿ ಕಾಲಿಗ ಹಾಕಿದ ಚಪ್ಪಲಿಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಆಯ ತಪ್ಪಿ ಟೈಲ್ಸ್ ನೆಲದ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಡಿ.20 ರಂದು ಪಟ್ರಮೆಯಲ್ಲಿ ನಡೆದಿದೆ.


ಪಟ್ರಮೆ ಗ್ರಾಮದ ದೇರಾಜೆ ಮನೆ ಗುರುವ (47 ವರ್ಷ) ಈ ಘಟನೆಯಲ್ಲಿ ಮೃತಪಟ್ಟವರು. ಈ ಬಗ್ಗೆ ಬಾಬು ಎಂಬವರು ಧರ್ಮಸ್ಥಳ ಠಾಣೆಗೆ ದೂರು ನೀಡಿ, ತನ್ನ ಚಿಕ್ಕಪ್ಪ ಗುರುವ ಎಂಬವರು ಡಿ. 19 ರಂದು ರಾತ್ರಿ ಪಟ್ರಮೆ ಗ್ರಾಮದ ಕುತ್ಯಾಡಿ ಎಂಬಲ್ಲಿ ರವೀಂದ್ರನಾಥ ಶೆಟ್ಟಿಯವರ ಹೊಸದಾಗಿ ನಿರ್ಮಾಣವಾಗುತ್ತಿರುವ ಮನೆಯ ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ವಾಪಾಸು ಒಳ ಮನೆಯ ಒಳಗಿನಿಂದ ಬರುತ್ತಿದ್ದ ಸಮಯ ಅವರು ಧರಿಸಿದ್ದ ಚಪ್ಪಲಿಯು ನೆಲಕ್ಕೆ ಹಾಸಿದ ಟೈಲ್ಸ್ ನಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಟೈಲ್ಸ್ ನೆಲದ ಮೇಲೆ ಹಿಂದಕ್ಕೆ ಬಿದ್ದು, ಹಿಂಬದಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು, ರವೀಂದ್ರನಾಥ ಶೆಟ್ಟಿ ಮತ್ತು ಅವರ ಮನೆಯವರು ಆರೈಕೆ ಮಾಡಿ ವಿಚಾರವನ್ನು ಅವರು ಪತ್ನಿ ಲಲಿತಾರವರಿಗೆ ತಿಳಿಸಿ ಅವರ ಜೊತೆ ಚಿಕಿತ್ಸೆ ಬಗ್ಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿನ ವೈದ್ಯರು ಪರೀಕ್ಷಿಸಿ ಸೂಚಿಸಿದಂತೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡು ಚಿಕಿತ್ಸೆಯಲ್ಲಿದ್ದವರು ಡಿ.20 ರಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ದೂರು ನೀಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ: 86/2023 ಕಲಂ:174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya
error: Content is protected !!