26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಬಳಂಜ: ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಇದರ ವರ್ಷಾವಧಿ ಜಾತ್ರೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿ ಪೂಜೆ, ನಾಗತಂಬಿಲ ಸೇವೆ, ದುರ್ಗಾ ನಮಸ್ಕಾರ ಪೂಜೆ, ದೊಡ್ಡ ರಂಗಪೂಜೆಯು ಡಿ.26 ರಿಂದ 27 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.


ಡಿ.26ರಂದು ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು, ಮಧ್ಯಾಹ್ನ ಸಾನಿಧ್ಯ ದೇವರ ಮಹಾಪೂಜೆ, ಗಂಧ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಾಯಂಕಾಲ ದೈವದ ಭಂಡಾರ ಇಳಿಯುವುದು ಮತ್ತು ದುರ್ಗಾ ನಮಸ್ಕಾರ ಪೂಜೆ, ಸಿರಿದೇವಿಗೆ ವಿಶೇಷ ಪೂಜೆ, ದೊಡ್ಡ ರಂಗಪೂಜೆ, ವ್ಯಾಘ್ರಚಾಮುಂಡಿ ನೇಮೋತ್ಸವ, ದೇವರ ಬಲಿ ಉತ್ಸವ, ದೈವ ದೇವರ ಭೇಟಿ, ವಸಂತ ಮಂಟಪ ಪೂಜೆ, ಅನ್ನಸಂತರ್ಪಣೆ. ರಾತ್ರಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಮತ್ತು ಪಂಚಶ್ರೀ ಭಜನಾ ಮಂಡಳಿ ಬಳಂಜ ಹಾಗೂ ಸ್ವಾತಿ ಮ್ಯೂಸಿಕಲ್ಸ್ ಕಾರ್ಯಾಣ ಇವರಿಂದ ಹಾಗೂ ಇತರ ಭಜನಾ ಮಂಡಳಿಗಳ ಭಜನೋತ್ಸವ ನಡೆಯಲಿದೆ.


ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆ ಶಿವಪ್ರಸಾದ್ ಅಜಿಲರು ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಧಾರ್ಮಿಕ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು, ಕುದ್ರೋಳಿ ಶ್ರೀ ನಾರಾಯಣ ಗುರುಸ್ವಾಮಿ ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ಧರ್ಮದರ್ಶಿ ಜಯ ಸಾಲಿಯಾನ್ ತಿಳಿಸಿರುತ್ತಾರೆ.

“ಚಿಲ್ಲರೆ ಕಾಸ್ ದಾಯೆ”: ರಾತ್ರಿ ಶ್ರೀ ವಿಷ್ಣು ಕಲಾವಿದೆರ್ ಮದ್ದಡ್ಕ ಅಭಿನಯದ ಅನಂತ್ ಎಸ್. ಇರ್ವತ್ರಾಯ ತಂಗೋಯಿ ರಚನೆದ “ಚಿಲ್ಲರೆ ಕಾಸ್ ದಾಯೆ…” ಸಾಂಸಾರಿಕ ಹಾಸ್ಯ ತುಳುನಾಟಕ ನಡೆಯಲಿದೆ.

Related posts

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya
error: Content is protected !!