23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಬಳಂಜ: ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಇದರ ವರ್ಷಾವಧಿ ಜಾತ್ರೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿ ಪೂಜೆ, ನಾಗತಂಬಿಲ ಸೇವೆ, ದುರ್ಗಾ ನಮಸ್ಕಾರ ಪೂಜೆ, ದೊಡ್ಡ ರಂಗಪೂಜೆಯು ಡಿ.26 ರಿಂದ 27 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.


ಡಿ.26ರಂದು ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು, ಮಧ್ಯಾಹ್ನ ಸಾನಿಧ್ಯ ದೇವರ ಮಹಾಪೂಜೆ, ಗಂಧ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಾಯಂಕಾಲ ದೈವದ ಭಂಡಾರ ಇಳಿಯುವುದು ಮತ್ತು ದುರ್ಗಾ ನಮಸ್ಕಾರ ಪೂಜೆ, ಸಿರಿದೇವಿಗೆ ವಿಶೇಷ ಪೂಜೆ, ದೊಡ್ಡ ರಂಗಪೂಜೆ, ವ್ಯಾಘ್ರಚಾಮುಂಡಿ ನೇಮೋತ್ಸವ, ದೇವರ ಬಲಿ ಉತ್ಸವ, ದೈವ ದೇವರ ಭೇಟಿ, ವಸಂತ ಮಂಟಪ ಪೂಜೆ, ಅನ್ನಸಂತರ್ಪಣೆ. ರಾತ್ರಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಮತ್ತು ಪಂಚಶ್ರೀ ಭಜನಾ ಮಂಡಳಿ ಬಳಂಜ ಹಾಗೂ ಸ್ವಾತಿ ಮ್ಯೂಸಿಕಲ್ಸ್ ಕಾರ್ಯಾಣ ಇವರಿಂದ ಹಾಗೂ ಇತರ ಭಜನಾ ಮಂಡಳಿಗಳ ಭಜನೋತ್ಸವ ನಡೆಯಲಿದೆ.


ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆ ಶಿವಪ್ರಸಾದ್ ಅಜಿಲರು ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಧಾರ್ಮಿಕ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು, ಕುದ್ರೋಳಿ ಶ್ರೀ ನಾರಾಯಣ ಗುರುಸ್ವಾಮಿ ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ಧರ್ಮದರ್ಶಿ ಜಯ ಸಾಲಿಯಾನ್ ತಿಳಿಸಿರುತ್ತಾರೆ.

“ಚಿಲ್ಲರೆ ಕಾಸ್ ದಾಯೆ”: ರಾತ್ರಿ ಶ್ರೀ ವಿಷ್ಣು ಕಲಾವಿದೆರ್ ಮದ್ದಡ್ಕ ಅಭಿನಯದ ಅನಂತ್ ಎಸ್. ಇರ್ವತ್ರಾಯ ತಂಗೋಯಿ ರಚನೆದ “ಚಿಲ್ಲರೆ ಕಾಸ್ ದಾಯೆ…” ಸಾಂಸಾರಿಕ ಹಾಸ್ಯ ತುಳುನಾಟಕ ನಡೆಯಲಿದೆ.

Related posts

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!