24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಡಿ.25ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಬೆಳಾಲು ಪೇಟೆಯಿಂದ ಮೆರವಣಿಗೆಯೊಂದಿಗೆ ಹಸಿರುವಾಣಿ ಸಮರ್ಪಣೆ, ಬಳಿಕ ಅನಂತಪದ್ಮನಾಭ ಮಹಿಳಾ ಕುಣಿತಾ ಭಜನಾ ತಂಡ ಮತ್ತು ಶ್ರೀ ಅನಂತೇಶ್ವರ ಭಜನಾ ಮಂಡಳಿಯಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೀ ನಾಗ ದೇವರಿಗೆ – ಕಲಶಾಭಿಷೇಕ, ತನು ಸಮರ್ಪಣೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ, ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ಊರವರಿಂದ ಶ್ರೀ ಮಹಾ ವಿಷ್ಣುಯಾಗ, ವಿಷ್ಣು ಸಹಸ್ರ ನಾಮ ಪಾರಾಯಣ ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ವಿಜಯ ಕುಮಾರ್ ಕೊಡಿಯಾಲ್‌ ಬೈಲ್ ನಿರ್ದೇಶನದಲ್ಲಿ ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಡಿ.26 ಬೆಳಿಗ್ಗೆ ಗಣಪತಿ ಹೋಮ, ಬಳಿಕ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಸಿರಿ ಮುಡಿ ಗಂಧ ಪ್ರಸಾದ ವಿತರಣೆ ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀ ದುರ್ಗಾಪೂಜೆ, ರಾತ್ರಿ ಪೂಜೆ, ಪ್ರಸನ್ನ ರಂಗ ಪೂಜೆ ಬಳಿಕ ಧಾರ್ಮಿಕ ಸಭೆ, ನಂತರ ಪರಿವಾರ ದೈವಗಳಾದ ಶ್ರೀ ರಕ್ತೇಶ್ವರಿ, ಭೈರವ, ಕಲ್ಲುರ್ಟಿ, ಪಂಜುರ್ಲಿ ದೈವಗಳಿಗೆ ಸಿರಿಸಿಂಗಾರ ನರ್ತನ ಸೇವೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ್ಪ ಗೌಡ ಅರಣೆಮಾರು ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!