23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಡಿ.25ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಬೆಳಾಲು ಪೇಟೆಯಿಂದ ಮೆರವಣಿಗೆಯೊಂದಿಗೆ ಹಸಿರುವಾಣಿ ಸಮರ್ಪಣೆ, ಬಳಿಕ ಅನಂತಪದ್ಮನಾಭ ಮಹಿಳಾ ಕುಣಿತಾ ಭಜನಾ ತಂಡ ಮತ್ತು ಶ್ರೀ ಅನಂತೇಶ್ವರ ಭಜನಾ ಮಂಡಳಿಯಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೀ ನಾಗ ದೇವರಿಗೆ – ಕಲಶಾಭಿಷೇಕ, ತನು ಸಮರ್ಪಣೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ, ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ಊರವರಿಂದ ಶ್ರೀ ಮಹಾ ವಿಷ್ಣುಯಾಗ, ವಿಷ್ಣು ಸಹಸ್ರ ನಾಮ ಪಾರಾಯಣ ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ವಿಜಯ ಕುಮಾರ್ ಕೊಡಿಯಾಲ್‌ ಬೈಲ್ ನಿರ್ದೇಶನದಲ್ಲಿ ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಡಿ.26 ಬೆಳಿಗ್ಗೆ ಗಣಪತಿ ಹೋಮ, ಬಳಿಕ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಸಿರಿ ಮುಡಿ ಗಂಧ ಪ್ರಸಾದ ವಿತರಣೆ ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀ ದುರ್ಗಾಪೂಜೆ, ರಾತ್ರಿ ಪೂಜೆ, ಪ್ರಸನ್ನ ರಂಗ ಪೂಜೆ ಬಳಿಕ ಧಾರ್ಮಿಕ ಸಭೆ, ನಂತರ ಪರಿವಾರ ದೈವಗಳಾದ ಶ್ರೀ ರಕ್ತೇಶ್ವರಿ, ಭೈರವ, ಕಲ್ಲುರ್ಟಿ, ಪಂಜುರ್ಲಿ ದೈವಗಳಿಗೆ ಸಿರಿಸಿಂಗಾರ ನರ್ತನ ಸೇವೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ್ಪ ಗೌಡ ಅರಣೆಮಾರು ತಿಳಿಸಿದ್ದಾರೆ.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya
error: Content is protected !!