September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಡಿ.25ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಬೆಳಾಲು ಪೇಟೆಯಿಂದ ಮೆರವಣಿಗೆಯೊಂದಿಗೆ ಹಸಿರುವಾಣಿ ಸಮರ್ಪಣೆ, ಬಳಿಕ ಅನಂತಪದ್ಮನಾಭ ಮಹಿಳಾ ಕುಣಿತಾ ಭಜನಾ ತಂಡ ಮತ್ತು ಶ್ರೀ ಅನಂತೇಶ್ವರ ಭಜನಾ ಮಂಡಳಿಯಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೀ ನಾಗ ದೇವರಿಗೆ – ಕಲಶಾಭಿಷೇಕ, ತನು ಸಮರ್ಪಣೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ, ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ಊರವರಿಂದ ಶ್ರೀ ಮಹಾ ವಿಷ್ಣುಯಾಗ, ವಿಷ್ಣು ಸಹಸ್ರ ನಾಮ ಪಾರಾಯಣ ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ವಿಜಯ ಕುಮಾರ್ ಕೊಡಿಯಾಲ್‌ ಬೈಲ್ ನಿರ್ದೇಶನದಲ್ಲಿ ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಡಿ.26 ಬೆಳಿಗ್ಗೆ ಗಣಪತಿ ಹೋಮ, ಬಳಿಕ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಸಿರಿ ಮುಡಿ ಗಂಧ ಪ್ರಸಾದ ವಿತರಣೆ ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀ ದುರ್ಗಾಪೂಜೆ, ರಾತ್ರಿ ಪೂಜೆ, ಪ್ರಸನ್ನ ರಂಗ ಪೂಜೆ ಬಳಿಕ ಧಾರ್ಮಿಕ ಸಭೆ, ನಂತರ ಪರಿವಾರ ದೈವಗಳಾದ ಶ್ರೀ ರಕ್ತೇಶ್ವರಿ, ಭೈರವ, ಕಲ್ಲುರ್ಟಿ, ಪಂಜುರ್ಲಿ ದೈವಗಳಿಗೆ ಸಿರಿಸಿಂಗಾರ ನರ್ತನ ಸೇವೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ್ಪ ಗೌಡ ಅರಣೆಮಾರು ತಿಳಿಸಿದ್ದಾರೆ.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya
error: Content is protected !!