23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

ಮಡಂತ್ಯಾರು : ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿಯು ಡಿ..17 ರಂದು ಆನಂದ ಅಟ್ಟತ್ತೋಡಿ ಇವರ ಮನೆಯಲ್ಲಿ ತಾಲೂಕು ಘಟಕದ ಅಧ್ಯಕ್ಷರಾದ ದಿನೇಶ್ ಕೆ ಕೊಕ್ಕಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕುಮಾರಿ ಸುಶ್ಮಿತಾ, ಕುಮಾರಿ ನಿಶ್ಮಿತಾ, ಕುಮಾರಿ ಸುಕನ್ಯಾ ಇವರು ಪ್ರಾರ್ಥನೆಯನ್ನು ಹಾಡಿದರು. ಕುಮಾರಿ ರಂಜಿನಿ ಇವರು ಅತಿಥಿಗಳನ್ನು ಸ್ವಾಗತಿಸಿದರು. ದೀಪ ಬೆಳಗಿಸಿ, ಡಾ|| ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವುದರ ಮೂಲಕ ಸಭೆಯನ್ನು ಆರಂಭಿಸಲಾಯಿತು.

ಗೋಪಾಲ ಕೃಷ್ಣ ಕುಕ್ಕಳ ಮಾತಾನಾಡುತ್ತಾ ಆದಿದ್ರಾವಿಡ ಸಮುದಾಯ ಪದದ ಹುಟ್ಟು ಬೆಳವಣಿಗೆಯನ್ನು ವಿವರಿಸುತ್ತಾ, ನಮ್ಮ ಕುಲದೇವರಾದ ಶ್ರೀ ಕಾನದ-ಕಟದರ ಬದುಕು, ಪರಿಶ್ರಮ, ತ್ಯಾಗಗಳು ನಮಗೆ ಆದರ್ಶ ಮತ್ತು ಪ್ರೇರಣೆ. ಆ ನಿಟ್ಟಿನಲ್ಲಿ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು, ಹಾಗೂ ನಮ್ಮ ಸಮುದಾಯಕ್ಕೆ ಆಗುವ ದೈಹಿಕ, ಮಾನಸಿಕ ದಾಳಿಯನ್ನು ಎದುರಿಸಲು ಜಾತಿ ಸಂಘಟನೆಯನ್ನು ಗಟ್ಟಿಗೊಳಿಸುವ ಅನಿವಾರ್ಯತೆ ಇದೆ ಎಂದರು.
ತಾಲೂಕಿನ ನಿಕಟಪೂರ್ವ ಉಪಾಧ್ಯಕ್ಷರಾದ ಲಕ್ಷ್ಮಣ ಜಿ.ಎಸ್ ಮಾತನಾಡುತ್ತಾ ನಮ್ಮ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಹಾಗೂ ಜೀವನ ಶೈಲಿ ಕೂಡ ಈ ಹಿಂದೆ ಅತ್ಯಂತ ತಳಮಟ್ಟದಲ್ಲಿತ್ತು, ನಾವೆಲ್ಲರೂ ಈ ಸಂಘಟನೆಯ ಮೂಲಕ ಒಟ್ಟಾಗಿ ಮುಂದುವರಿದ ಇತರ ಸಮುದಾಯಗಳಂತೆ ನಾವೂ ಕೂಡ ಶೈಕ್ಷಣಿಕ, ಸಾಮಾಜಿಕ ಆರ್ಥಿಕವಾಗಿ ಹಾಗೂ ನಮ್ಮ ಜೀವನ ಶೈಲಿಕೂಡ ಧನಾತ್ಮಕವಾಗಿ ಬದಲಾಗಬೇಕಾಗಿದೆ. ಡಾ|| ಬಿ.ಆರ್.ಅಂಬೇಡ್ಕರ್ ಹಾಗೂ ಕುಲದೇವರಾದ ಕಾನದ-ಕಟದರ ಸಾಹಸ, ಸಾಧನೆಗಳನ್ನು ವಿವರಿಸುತ್ತಾ ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ತಾಲೂಕು ಘಟಕದ ಅಧ್ಯಕ್ಷರಾದ ದಿನೇಶ್ ಕೆ ಕೊಕ್ಕಡ ಮಾತನಾಡುತ್ತಾ, ಡಿ.24 ರಂದು ಮಂಗಳೂರಿನ ಪುರಭವನದಲ್ಲಿ ನಡೆಯುವ ಆದಿದ್ರಾವಿಡ ಸಮುದಾಯದ ರಾಜ್ಯ ಸಮಾವೇಶದ ಯಶಸ್ಸಿಗೆ ಎಲ್ಲರೂ ಸಹಕರಿಸುವ ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಗ್ರಾಮದ ಜಾತಿಬಾಂಧವರ ಜೊತೆ ಉತ್ತಮ ಭಾಂದವ್ಯ ಬೆಳೆಸಿಕೊಂಡು ಸಮುದಾಯಕ್ಕೆ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಮಾದರಿ ಗ್ರಾಮ ಸಮಿತಿಯಾಗಿ ರೂಪುಗೊಳ್ಳಲಿ ಎಂದು ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.
ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ಬೆಳ್ತಂಗಡಿಯ ಕುಕ್ಕಳ-ಮಡಂತ್ಯಾರು ಗ್ರಾಮ ಸಮಿತಿಗೆ ನೂತನ ಅಧ್ಯಕ್ಷರಾಗಿ ಆನಂದ ಅಟ್ಟತ್ತೋಡಿ, ಉಪಾಧ್ಯಕ್ಷರಾಗಿ ಪೂರ್ಣೆಶ, ಕಾರ್ಯದರ್ಶಿಯಾಗಿ ಕುಮಾರಿ ರಂಜಿನಿ, ಜೊತೆಕಾರ್ಯದರ್ಶಿಯಾಗಿ ಆನಂದ ಬೆರ್ಕಳ, ಕೋಶಾಧಿಕಾರಿಯಾಗಿ ನವೀನ್ ಆಯ್ಕೆಯಾದರು.

ಸಭೆಯಲ್ಲಿ ತಾಲೂಕು ಘಟಕದ ಉಪಧ್ಯಾಕ್ಷರಾದ ರಾಮು ಪಡಂಗಡಿ, ಜೊತೆಕಾರ್ಯದರ್ಶಿಯಾದ ಶಿವಕುಮಾರ್, ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಗೋಪಾಲ ಕೃಷ್ಣ ಕುಕ್ಕಳ, ಉಪಾಧ್ಯಕ್ಷರಾದ ಲಕ್ಷ್ಮಣ್ ಜಿ.ಎಸ್, ಮುಂತಾದವರು ಉಪಸ್ಥಿತರಿದ್ದರು. ಪ್ರಜ್ವಲ್ ಧನ್ಯವಾದವಿತ್ತರು.

Related posts

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya
error: Content is protected !!