24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

ಶಿಬಾಜೆ: ಶಿಬಾಜೆ ಗ್ರಾಮದ ಆರಂಪಾದೆ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸಿಮೆಂಟ್ ಶೀಟ್ ಛಾವಣಿಯ ಕಟ್ಟಡವನ್ನು ಧ್ವಂಸ ಮಾಡಿದ ಪ್ರಕರಣದಲ್ಲಿ ಶ್ರೀಮತಿ ಲತಾ ಅವರು ನೀಡಿದ ದೂರಿನಂತೆ ಎಂಟು ಮಂದಿ ಹಾಗೂ ಇತರರ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಡಿ.20 ರಂದು ಪ್ರಕರಣ ದಾಖಲಾಗಿದೆ.

ಶಿಬಾಜೆ ಗ್ರಾಮದ ನಿವಾಸಿ ಲತಾ ಎಂಬವರು ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಲ್ಲಿ ನನ್ನ ಗಂಡ ಕೆ.ಆರ್ ವಾಸುರವರು ಶಿಬಾಜೆ ಗ್ರಾಮದ ಆರಂಪಾದೆ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಸಿಮೆಂಟ್ ಶೀಟ್ ಛಾವಣಿಯ ಕಟ್ಟಡ ನಿರ್ಮಿಸಿ, ಅದರಲ್ಲಿ ಪರವಾನಿಗೆ ಪಡೆದು ಜಿನಸು ಅಂಗಡಿ ವ್ಯಾಪಾರ ಮಾಡಿಕೊಂಡಿರುತ್ತಾರೆ. ಸದರಿ ಜಾಗದ ತಕರಾರಿಗೆ ಸಂಬಂಧಿಸಿ, ಡಿ.14 ರಂದು ಟಿ.ಕೆ ಮ್ಯಾಥ್ಯೂ ಮತ್ತು ಪ್ರಮೋದ್ ರವರುಗಳು ಸದ್ರಿ ಅಂಗಡಿ ಕಟ್ಟಡ ಇರುವ ಜಮೀನಿನ ಸುತ್ತ ಬೇಲಿ ನಿರ್ಮಾಣ ಮಾಡಿದ್ದು, ಸದ್ರಿ ಬೇಲಿಯನ್ನು ನಾವು ತೆರವುಗೊಳಿಸಿರುತ್ತೇವೆ.

ಡಿ.19ರಂದು ರಾತ್ರಿ ಟಿ ಕೆ ಮ್ಯಾಥ್ಯೂ, ಪ್ರಮೋದ್, ಸನೋಧ್ ಕುಮಾರ್, ಕುರಿಯಾಕೋಸ್, ಜಯರಾಜ, ಎನ್.ಎಮ್ ಕುರಿಯಾಕೋಸ್, ರೋಬಿನ್ಸ್, ಸಂತೋಷ್ ಯು. ಜಿ ಮತ್ತು ಇತರ ೧೫ ಜನರು ಮಾರಕಾಯುಧಗಳನ್ನು ಹಿಡಿದುಕೊಂಡು ಅಂಗಡಿ ಕಟ್ಟಡ ಇರುವ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಕಟ್ಟಡವನ್ನು ದ್ವಂಸ ಮಾಡಲು ಪ್ರಾರಂಭಿಸಿದ್ದು, ಈ ವೇಳೆ ನಾವು ಆಕ್ಷೇಪಿಸಿದಾಗ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವುದಲ್ಲದೇ ನನ್ನ ಗಂಡನ ಮಾಲಕತ್ವದ ಅಂಗಡಿಯನ್ನು ದ್ವಂಸ ಮಾಡಿ ಸುಮಾರು ರೂ. 50 ಸಾವಿರ ನಷ್ಟವನ್ನುಂಟು ಮಾಡಿರುತ್ತಾರೆ ಎಂಬ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 110/2023 ಕಲಂ: 143, 147, 148, 447, 427, 341, 323,504,506(2) 395 ಜೊತೆಗೆ 149 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya
error: Content is protected !!