23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

ಶಿಬಾಜೆ: ಶಿಬಾಜೆ ಗ್ರಾಮದ ಆರಂಪಾದೆ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸಿಮೆಂಟ್ ಶೀಟ್ ಛಾವಣಿಯ ಕಟ್ಟಡವನ್ನು ಧ್ವಂಸ ಮಾಡಿದ ಪ್ರಕರಣದಲ್ಲಿ ಶ್ರೀಮತಿ ಲತಾ ಅವರು ನೀಡಿದ ದೂರಿನಂತೆ ಎಂಟು ಮಂದಿ ಹಾಗೂ ಇತರರ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಡಿ.20 ರಂದು ಪ್ರಕರಣ ದಾಖಲಾಗಿದೆ.

ಶಿಬಾಜೆ ಗ್ರಾಮದ ನಿವಾಸಿ ಲತಾ ಎಂಬವರು ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಲ್ಲಿ ನನ್ನ ಗಂಡ ಕೆ.ಆರ್ ವಾಸುರವರು ಶಿಬಾಜೆ ಗ್ರಾಮದ ಆರಂಪಾದೆ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಸಿಮೆಂಟ್ ಶೀಟ್ ಛಾವಣಿಯ ಕಟ್ಟಡ ನಿರ್ಮಿಸಿ, ಅದರಲ್ಲಿ ಪರವಾನಿಗೆ ಪಡೆದು ಜಿನಸು ಅಂಗಡಿ ವ್ಯಾಪಾರ ಮಾಡಿಕೊಂಡಿರುತ್ತಾರೆ. ಸದರಿ ಜಾಗದ ತಕರಾರಿಗೆ ಸಂಬಂಧಿಸಿ, ಡಿ.14 ರಂದು ಟಿ.ಕೆ ಮ್ಯಾಥ್ಯೂ ಮತ್ತು ಪ್ರಮೋದ್ ರವರುಗಳು ಸದ್ರಿ ಅಂಗಡಿ ಕಟ್ಟಡ ಇರುವ ಜಮೀನಿನ ಸುತ್ತ ಬೇಲಿ ನಿರ್ಮಾಣ ಮಾಡಿದ್ದು, ಸದ್ರಿ ಬೇಲಿಯನ್ನು ನಾವು ತೆರವುಗೊಳಿಸಿರುತ್ತೇವೆ.

ಡಿ.19ರಂದು ರಾತ್ರಿ ಟಿ ಕೆ ಮ್ಯಾಥ್ಯೂ, ಪ್ರಮೋದ್, ಸನೋಧ್ ಕುಮಾರ್, ಕುರಿಯಾಕೋಸ್, ಜಯರಾಜ, ಎನ್.ಎಮ್ ಕುರಿಯಾಕೋಸ್, ರೋಬಿನ್ಸ್, ಸಂತೋಷ್ ಯು. ಜಿ ಮತ್ತು ಇತರ ೧೫ ಜನರು ಮಾರಕಾಯುಧಗಳನ್ನು ಹಿಡಿದುಕೊಂಡು ಅಂಗಡಿ ಕಟ್ಟಡ ಇರುವ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಕಟ್ಟಡವನ್ನು ದ್ವಂಸ ಮಾಡಲು ಪ್ರಾರಂಭಿಸಿದ್ದು, ಈ ವೇಳೆ ನಾವು ಆಕ್ಷೇಪಿಸಿದಾಗ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವುದಲ್ಲದೇ ನನ್ನ ಗಂಡನ ಮಾಲಕತ್ವದ ಅಂಗಡಿಯನ್ನು ದ್ವಂಸ ಮಾಡಿ ಸುಮಾರು ರೂ. 50 ಸಾವಿರ ನಷ್ಟವನ್ನುಂಟು ಮಾಡಿರುತ್ತಾರೆ ಎಂಬ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 110/2023 ಕಲಂ: 143, 147, 148, 447, 427, 341, 323,504,506(2) 395 ಜೊತೆಗೆ 149 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!