32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಉದ್ಯೋಗಿಯೊಬ್ಬರು ಸರಕಾರಿ ಬಸ್ ಗೆ ಹತ್ತುವಾಗ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಡಿ.20 ರಂದು ಇಬ್ಬರು ತಮಿಳುನಾಡು ರಾಜ್ಯದ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸರಕಾರಿ ಉದ್ಯೋಗಿಯಾಗಿರುವ ವಾರಿಜಾ ಎಂಬವರು ಬೆಳ್ತಂಗಡಿ ಸರಕಾರಿ ಬಸ್ ಗೆ ಡಿ.12 ರಂದು ಸರಕಾರಿ ಬಸ್ ಹತ್ತುವ ವೇಳೆ 24 ಗ್ರಾಂ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ‌ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.

ಈ ಪ್ರಕರಣ ತನಿಖೆ ನಡೆಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ತಮಿಳುನಾಡು ರಾಜ್ಯದ ತಿರುಪುರ್ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು(35) ಮತ್ತು ದಿವ್ಯಾ ಯಾನೆ ಕಾಮಾಚಿ(30) ಇಬ್ಬರನ್ನು ಆರೋಪಿಗಳನ್ನು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಡಿ.20 ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಆರೋಪಿಗಳ ಬಳಿಯಿಂದ ಪೊಲೀಸರಿಗೆ ನೀಡಿದ್ದಾರೆ. ಆರೋಪಿಗಳ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ಪ್ರಕರಣ ದಾಖಲಾಗಿದ್ದು. ವಿಚಾರಣೆ ವೇಳೆ ಮುಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಪ್ಪೋಪ್ಪಿಕೊಂಡಿದ್ದಾರೆ.

ಇಬ್ಬರು ಆರೋಪಿಗಳನ್ನು ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ಸರ್ಕಲ್‌‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya
error: Content is protected !!