38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಕಿರು ಸೇತುವೆಯು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿಯುವ ಬೀತಿಯಲ್ಲಿದೆ ಇದನ್ನು ಮನಗಂಡ ರಕ್ಷಿತ್ ಶಿವರಾಂರವರು ಊರವರ ಬೇಡಿಕೆಯಂತೆ ಇತ್ತೀಚೆಗೆ ಸೇತುವೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಲೋಕೋಪಯೋಗಿ ಉಪ ವಿಭಾಗ ಬೆಳ್ತಂಗಡಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಸಮಗ್ರ ವರದಿ ತಯಾರಿಸಿದರು.


ಈ ವರದಿಯನ್ನು ಹಾಗೂ ಊರವರ ಬಹುದಿನಗಳ ಬೇಡಿಕೆಯ ಪತ್ರವನ್ನು ಇತ್ತೀಚೆಗೆ ಬೆಂಗಳೂರಿಗೆ ತೆರಳಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಇವರನ್ನು ಬೇಟಿಯಾಗಿ ಅತೀ ತುರ್ತಾಗಿ ಈ ಕಿರು ಸೇತುವೆಗೆ ಅನುದಾನ ಒದಗಿಸಿ ಮುಂದಿನ ಮಳೆಗಾಲ ಪ್ರಾರಂಭದ ಒಳಗೆ ಸೇತುವೆ ನಿರ್ಮಿಸಿ ಜನರ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಶೀಘ್ರದಲ್ಲೆ ಕಿರು ಸೇತುವೆಗೆ ಅನುದಾನ ಬಿಡುಗಡೆಗೊಳಿಸುತ್ತೇವೆ ಎಂಬ ಭರವಸೆ ನೀಡಿದರು.


ಈ ಸೇತುವೆಯ ಮೂಲಕ ಬಂಗಾಡಿ- ಕೊಲ್ಲಿ- ಇಂದಬೆಟ್ಟು- ಗುರಿಪಳ್ಳಕ್ಕೆ ದಿನನಿತ್ಯ ನೂರಾರು ವಾಹನಗಳು ಸಂಚರಿಸುತಿದ್ದು ನೂರಾರು ವಿಧ್ಯಾರ್ಥಿಗಳು ದಿನನಿತ್ಯ ಈ ಸೇತುವೆಯ ಮೂಲಕ ಹಾದು ಶಾಲೆಗಳಿಗೆ ಹೋಗುತ್ತಿದ್ದಾರೆ. ಅತೀ ಅಗತ್ಯವಾದ ಈ ಸೇತುವೆಯು ಕುಸಿಯುವ ಮುಂಚಿತವಾಗಿ ಹೊಸ ಸೇತುವೆ ನಿರ್ಮಾಣ ಆಗಿ ಉದ್ಘಾಟನೆಗೊಂಡರೆ ಈ ಸಂಪರ್ಕವನ್ನು ಅವಲಂಬಿಸಿದ ಅದೆಷ್ಟೋ ಕುಟುಂಬಗಳಿಗೆ ಉಪಯೋಗವಾಗಲಿದೆ. ರಕ್ಷಿತ್ ಶಿವರಾಂರವರ ಈ ಪ್ರಯತ್ನ ಊರವರಿಗೆ ಹೊಸ ಆಶಾಭಾವನೆ ಹುಟ್ಟಿಸಿದೆ.

Related posts

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya
error: Content is protected !!