25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಕಿರು ಸೇತುವೆಯು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿಯುವ ಬೀತಿಯಲ್ಲಿದೆ ಇದನ್ನು ಮನಗಂಡ ರಕ್ಷಿತ್ ಶಿವರಾಂರವರು ಊರವರ ಬೇಡಿಕೆಯಂತೆ ಇತ್ತೀಚೆಗೆ ಸೇತುವೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಲೋಕೋಪಯೋಗಿ ಉಪ ವಿಭಾಗ ಬೆಳ್ತಂಗಡಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಸಮಗ್ರ ವರದಿ ತಯಾರಿಸಿದರು.


ಈ ವರದಿಯನ್ನು ಹಾಗೂ ಊರವರ ಬಹುದಿನಗಳ ಬೇಡಿಕೆಯ ಪತ್ರವನ್ನು ಇತ್ತೀಚೆಗೆ ಬೆಂಗಳೂರಿಗೆ ತೆರಳಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಇವರನ್ನು ಬೇಟಿಯಾಗಿ ಅತೀ ತುರ್ತಾಗಿ ಈ ಕಿರು ಸೇತುವೆಗೆ ಅನುದಾನ ಒದಗಿಸಿ ಮುಂದಿನ ಮಳೆಗಾಲ ಪ್ರಾರಂಭದ ಒಳಗೆ ಸೇತುವೆ ನಿರ್ಮಿಸಿ ಜನರ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಶೀಘ್ರದಲ್ಲೆ ಕಿರು ಸೇತುವೆಗೆ ಅನುದಾನ ಬಿಡುಗಡೆಗೊಳಿಸುತ್ತೇವೆ ಎಂಬ ಭರವಸೆ ನೀಡಿದರು.


ಈ ಸೇತುವೆಯ ಮೂಲಕ ಬಂಗಾಡಿ- ಕೊಲ್ಲಿ- ಇಂದಬೆಟ್ಟು- ಗುರಿಪಳ್ಳಕ್ಕೆ ದಿನನಿತ್ಯ ನೂರಾರು ವಾಹನಗಳು ಸಂಚರಿಸುತಿದ್ದು ನೂರಾರು ವಿಧ್ಯಾರ್ಥಿಗಳು ದಿನನಿತ್ಯ ಈ ಸೇತುವೆಯ ಮೂಲಕ ಹಾದು ಶಾಲೆಗಳಿಗೆ ಹೋಗುತ್ತಿದ್ದಾರೆ. ಅತೀ ಅಗತ್ಯವಾದ ಈ ಸೇತುವೆಯು ಕುಸಿಯುವ ಮುಂಚಿತವಾಗಿ ಹೊಸ ಸೇತುವೆ ನಿರ್ಮಾಣ ಆಗಿ ಉದ್ಘಾಟನೆಗೊಂಡರೆ ಈ ಸಂಪರ್ಕವನ್ನು ಅವಲಂಬಿಸಿದ ಅದೆಷ್ಟೋ ಕುಟುಂಬಗಳಿಗೆ ಉಪಯೋಗವಾಗಲಿದೆ. ರಕ್ಷಿತ್ ಶಿವರಾಂರವರ ಈ ಪ್ರಯತ್ನ ಊರವರಿಗೆ ಹೊಸ ಆಶಾಭಾವನೆ ಹುಟ್ಟಿಸಿದೆ.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya
error: Content is protected !!