22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಕಿರು ಸೇತುವೆಯು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿಯುವ ಬೀತಿಯಲ್ಲಿದೆ ಇದನ್ನು ಮನಗಂಡ ರಕ್ಷಿತ್ ಶಿವರಾಂರವರು ಊರವರ ಬೇಡಿಕೆಯಂತೆ ಇತ್ತೀಚೆಗೆ ಸೇತುವೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಲೋಕೋಪಯೋಗಿ ಉಪ ವಿಭಾಗ ಬೆಳ್ತಂಗಡಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಸಮಗ್ರ ವರದಿ ತಯಾರಿಸಿದರು.


ಈ ವರದಿಯನ್ನು ಹಾಗೂ ಊರವರ ಬಹುದಿನಗಳ ಬೇಡಿಕೆಯ ಪತ್ರವನ್ನು ಇತ್ತೀಚೆಗೆ ಬೆಂಗಳೂರಿಗೆ ತೆರಳಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಇವರನ್ನು ಬೇಟಿಯಾಗಿ ಅತೀ ತುರ್ತಾಗಿ ಈ ಕಿರು ಸೇತುವೆಗೆ ಅನುದಾನ ಒದಗಿಸಿ ಮುಂದಿನ ಮಳೆಗಾಲ ಪ್ರಾರಂಭದ ಒಳಗೆ ಸೇತುವೆ ನಿರ್ಮಿಸಿ ಜನರ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಶೀಘ್ರದಲ್ಲೆ ಕಿರು ಸೇತುವೆಗೆ ಅನುದಾನ ಬಿಡುಗಡೆಗೊಳಿಸುತ್ತೇವೆ ಎಂಬ ಭರವಸೆ ನೀಡಿದರು.


ಈ ಸೇತುವೆಯ ಮೂಲಕ ಬಂಗಾಡಿ- ಕೊಲ್ಲಿ- ಇಂದಬೆಟ್ಟು- ಗುರಿಪಳ್ಳಕ್ಕೆ ದಿನನಿತ್ಯ ನೂರಾರು ವಾಹನಗಳು ಸಂಚರಿಸುತಿದ್ದು ನೂರಾರು ವಿಧ್ಯಾರ್ಥಿಗಳು ದಿನನಿತ್ಯ ಈ ಸೇತುವೆಯ ಮೂಲಕ ಹಾದು ಶಾಲೆಗಳಿಗೆ ಹೋಗುತ್ತಿದ್ದಾರೆ. ಅತೀ ಅಗತ್ಯವಾದ ಈ ಸೇತುವೆಯು ಕುಸಿಯುವ ಮುಂಚಿತವಾಗಿ ಹೊಸ ಸೇತುವೆ ನಿರ್ಮಾಣ ಆಗಿ ಉದ್ಘಾಟನೆಗೊಂಡರೆ ಈ ಸಂಪರ್ಕವನ್ನು ಅವಲಂಬಿಸಿದ ಅದೆಷ್ಟೋ ಕುಟುಂಬಗಳಿಗೆ ಉಪಯೋಗವಾಗಲಿದೆ. ರಕ್ಷಿತ್ ಶಿವರಾಂರವರ ಈ ಪ್ರಯತ್ನ ಊರವರಿಗೆ ಹೊಸ ಆಶಾಭಾವನೆ ಹುಟ್ಟಿಸಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!