September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಕಿರು ಸೇತುವೆಯು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿಯುವ ಬೀತಿಯಲ್ಲಿದೆ ಇದನ್ನು ಮನಗಂಡ ರಕ್ಷಿತ್ ಶಿವರಾಂರವರು ಊರವರ ಬೇಡಿಕೆಯಂತೆ ಇತ್ತೀಚೆಗೆ ಸೇತುವೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಲೋಕೋಪಯೋಗಿ ಉಪ ವಿಭಾಗ ಬೆಳ್ತಂಗಡಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಸಮಗ್ರ ವರದಿ ತಯಾರಿಸಿದರು.


ಈ ವರದಿಯನ್ನು ಹಾಗೂ ಊರವರ ಬಹುದಿನಗಳ ಬೇಡಿಕೆಯ ಪತ್ರವನ್ನು ಇತ್ತೀಚೆಗೆ ಬೆಂಗಳೂರಿಗೆ ತೆರಳಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಇವರನ್ನು ಬೇಟಿಯಾಗಿ ಅತೀ ತುರ್ತಾಗಿ ಈ ಕಿರು ಸೇತುವೆಗೆ ಅನುದಾನ ಒದಗಿಸಿ ಮುಂದಿನ ಮಳೆಗಾಲ ಪ್ರಾರಂಭದ ಒಳಗೆ ಸೇತುವೆ ನಿರ್ಮಿಸಿ ಜನರ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಶೀಘ್ರದಲ್ಲೆ ಕಿರು ಸೇತುವೆಗೆ ಅನುದಾನ ಬಿಡುಗಡೆಗೊಳಿಸುತ್ತೇವೆ ಎಂಬ ಭರವಸೆ ನೀಡಿದರು.


ಈ ಸೇತುವೆಯ ಮೂಲಕ ಬಂಗಾಡಿ- ಕೊಲ್ಲಿ- ಇಂದಬೆಟ್ಟು- ಗುರಿಪಳ್ಳಕ್ಕೆ ದಿನನಿತ್ಯ ನೂರಾರು ವಾಹನಗಳು ಸಂಚರಿಸುತಿದ್ದು ನೂರಾರು ವಿಧ್ಯಾರ್ಥಿಗಳು ದಿನನಿತ್ಯ ಈ ಸೇತುವೆಯ ಮೂಲಕ ಹಾದು ಶಾಲೆಗಳಿಗೆ ಹೋಗುತ್ತಿದ್ದಾರೆ. ಅತೀ ಅಗತ್ಯವಾದ ಈ ಸೇತುವೆಯು ಕುಸಿಯುವ ಮುಂಚಿತವಾಗಿ ಹೊಸ ಸೇತುವೆ ನಿರ್ಮಾಣ ಆಗಿ ಉದ್ಘಾಟನೆಗೊಂಡರೆ ಈ ಸಂಪರ್ಕವನ್ನು ಅವಲಂಬಿಸಿದ ಅದೆಷ್ಟೋ ಕುಟುಂಬಗಳಿಗೆ ಉಪಯೋಗವಾಗಲಿದೆ. ರಕ್ಷಿತ್ ಶಿವರಾಂರವರ ಈ ಪ್ರಯತ್ನ ಊರವರಿಗೆ ಹೊಸ ಆಶಾಭಾವನೆ ಹುಟ್ಟಿಸಿದೆ.

Related posts

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿಗಳ ಬೇಡಿಕೆಗಳಿಗೆ ಒಪ್ಪಿದ ಕೇಂದ್ರ ಸರಕಾರ: ಉಪವಾಸ ಸತ್ಯಾಗ್ರಹ ಹಿಂಪಡೆದ ಶೇಖರ್ ಲಾಯಿಲ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಮಾಲಾಡಿ  ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!