23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಕಿರು ಸೇತುವೆಯು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿಯುವ ಬೀತಿಯಲ್ಲಿದೆ ಇದನ್ನು ಮನಗಂಡ ರಕ್ಷಿತ್ ಶಿವರಾಂರವರು ಊರವರ ಬೇಡಿಕೆಯಂತೆ ಇತ್ತೀಚೆಗೆ ಸೇತುವೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಲೋಕೋಪಯೋಗಿ ಉಪ ವಿಭಾಗ ಬೆಳ್ತಂಗಡಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಸಮಗ್ರ ವರದಿ ತಯಾರಿಸಿದರು.


ಈ ವರದಿಯನ್ನು ಹಾಗೂ ಊರವರ ಬಹುದಿನಗಳ ಬೇಡಿಕೆಯ ಪತ್ರವನ್ನು ಇತ್ತೀಚೆಗೆ ಬೆಂಗಳೂರಿಗೆ ತೆರಳಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಇವರನ್ನು ಬೇಟಿಯಾಗಿ ಅತೀ ತುರ್ತಾಗಿ ಈ ಕಿರು ಸೇತುವೆಗೆ ಅನುದಾನ ಒದಗಿಸಿ ಮುಂದಿನ ಮಳೆಗಾಲ ಪ್ರಾರಂಭದ ಒಳಗೆ ಸೇತುವೆ ನಿರ್ಮಿಸಿ ಜನರ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಶೀಘ್ರದಲ್ಲೆ ಕಿರು ಸೇತುವೆಗೆ ಅನುದಾನ ಬಿಡುಗಡೆಗೊಳಿಸುತ್ತೇವೆ ಎಂಬ ಭರವಸೆ ನೀಡಿದರು.


ಈ ಸೇತುವೆಯ ಮೂಲಕ ಬಂಗಾಡಿ- ಕೊಲ್ಲಿ- ಇಂದಬೆಟ್ಟು- ಗುರಿಪಳ್ಳಕ್ಕೆ ದಿನನಿತ್ಯ ನೂರಾರು ವಾಹನಗಳು ಸಂಚರಿಸುತಿದ್ದು ನೂರಾರು ವಿಧ್ಯಾರ್ಥಿಗಳು ದಿನನಿತ್ಯ ಈ ಸೇತುವೆಯ ಮೂಲಕ ಹಾದು ಶಾಲೆಗಳಿಗೆ ಹೋಗುತ್ತಿದ್ದಾರೆ. ಅತೀ ಅಗತ್ಯವಾದ ಈ ಸೇತುವೆಯು ಕುಸಿಯುವ ಮುಂಚಿತವಾಗಿ ಹೊಸ ಸೇತುವೆ ನಿರ್ಮಾಣ ಆಗಿ ಉದ್ಘಾಟನೆಗೊಂಡರೆ ಈ ಸಂಪರ್ಕವನ್ನು ಅವಲಂಬಿಸಿದ ಅದೆಷ್ಟೋ ಕುಟುಂಬಗಳಿಗೆ ಉಪಯೋಗವಾಗಲಿದೆ. ರಕ್ಷಿತ್ ಶಿವರಾಂರವರ ಈ ಪ್ರಯತ್ನ ಊರವರಿಗೆ ಹೊಸ ಆಶಾಭಾವನೆ ಹುಟ್ಟಿಸಿದೆ.

Related posts

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!