23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

ಬೆಳ್ತಂಗಡಿ: ಲಕ್ಷಾಂತರ ರಾಮಭಕ್ತರ ಬಲಿದಾನ, ತ್ಯಾಗದ ಫಲವಾಗಿ ಜ.22 ರಂದು ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಯಾಗಲಿದೆ. ಆ ಪ್ರಯಕ್ತ ರಾಮಮಂತ್ರಾಕ್ಷತೆಯನ್ನು‌ ಮನೆಮನೆಗೆ ತಲುಪಿಸುವ ಕಾರ್ಯವನ್ನು ಶ್ರದ್ಧೆ, ಭಕ್ತಿ, ಪೂಜ್ಯತೆಯಿಂದ ಮಾಡೋಣ ಎಂದು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು.
ಅವರು ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಹಸ್ತಾಂತರಿಸಿ ಆಶೀರ್ವದಿಸಿದರು.


ರಾಮ ಭಾರತದ, ಭಾರತೀಯರ ಆತ್ಮ. ಧರ್ಮದ ಅಸ್ತಿತ್ವವಿದ್ದರೆ, ದೇಶ ಸುಭಿಕ್ಷವಾಗಿರುತ್ತದೆ. ರಾಮನಾಮ ಸ್ಮರಣೆಯೊಂದಿಗೆ ಹನುಮಂತನ ಜಪವನ್ನೂ ಮಾಡುತ್ತ ರಾಮಮಂತ್ರಾಕ್ಷತೆಯ ಅಪೂರ್ವ ಅಭಿಯಾನದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳೋಣ ಎಂದರು.


ರಾ.ಸ್ವ‌.ಸಂಘದ ವಿಭಾಗ ಸಾಮರಸ್ಯ ಸಂಯೋಜಕ ರವೀಂದ್ರ ಅವರು, ಕಳೆದ 495 ವರ್ಷಗಳ ಸಂಘರ್ಷ ಅಂತಿಮ‌ ಹಂತಕ್ಕೆ ಬಂದಿದೆ. ರಾಮಜನ್ಮಭೂಮಿಗಾಗಿ 72 ಬಾರಿ ಸಂಘಷ೯ ನಡೆದಿದೆ, ಸುಮಾರು ಮೂರುಕಾಲು ಲಕ್ಷ ಮಂದಿ ಪ್ರಾಣತೆತ್ತಿದ್ದಾರೆ. ರಾಮನನ್ನು ಬಿಟ್ಟು ಭಾರತೀಯರು ಬದುಕಲು ಸಾಧ್ಯವಿಲ್ಲ. ರಾಮಮಂತ್ರಾಕ್ಷತೆಯನ್ನು‌ ಪ್ರತಿಯೊಂದು ಹಿಂದು‌ ಮನೆಗಳಿಗೆ ತಲುಪಿಸುವ ಗುರುತರ ಕಾರ್ಯ ನಮ್ಮ ಮೇಲಿದೆ ಎಂದರು.
ವೇದಿಕೆಯಲ್ಲಿ ರಾ.ಸ್ವ.ಸಂಘದ ಪುತ್ತೂರು ಜಿಲ್ಲಾ ಸಹಕಾರ್ಯವಾಹ ಸಂತೋಷ್ ಕಾಪಿನಡ್ಕ, ವೇಣೂರು ತಾಲೂಕು ಸಂಘಚಾಲಕ್ ರಘುನಂದನ್ ಇದ್ದರು.
ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಕಾಶ್ ಪುರೋಹಿತ್ ಸ್ವಾಗತಿಸಿದರು. ವಿಜಯಗೌಡ ವಂದಿಸಿದರು.

Related posts

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya
error: Content is protected !!