25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

ಬೆಳ್ತಂಗಡಿ: ಲಕ್ಷಾಂತರ ರಾಮಭಕ್ತರ ಬಲಿದಾನ, ತ್ಯಾಗದ ಫಲವಾಗಿ ಜ.22 ರಂದು ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಯಾಗಲಿದೆ. ಆ ಪ್ರಯಕ್ತ ರಾಮಮಂತ್ರಾಕ್ಷತೆಯನ್ನು‌ ಮನೆಮನೆಗೆ ತಲುಪಿಸುವ ಕಾರ್ಯವನ್ನು ಶ್ರದ್ಧೆ, ಭಕ್ತಿ, ಪೂಜ್ಯತೆಯಿಂದ ಮಾಡೋಣ ಎಂದು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು.
ಅವರು ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಹಸ್ತಾಂತರಿಸಿ ಆಶೀರ್ವದಿಸಿದರು.


ರಾಮ ಭಾರತದ, ಭಾರತೀಯರ ಆತ್ಮ. ಧರ್ಮದ ಅಸ್ತಿತ್ವವಿದ್ದರೆ, ದೇಶ ಸುಭಿಕ್ಷವಾಗಿರುತ್ತದೆ. ರಾಮನಾಮ ಸ್ಮರಣೆಯೊಂದಿಗೆ ಹನುಮಂತನ ಜಪವನ್ನೂ ಮಾಡುತ್ತ ರಾಮಮಂತ್ರಾಕ್ಷತೆಯ ಅಪೂರ್ವ ಅಭಿಯಾನದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳೋಣ ಎಂದರು.


ರಾ.ಸ್ವ‌.ಸಂಘದ ವಿಭಾಗ ಸಾಮರಸ್ಯ ಸಂಯೋಜಕ ರವೀಂದ್ರ ಅವರು, ಕಳೆದ 495 ವರ್ಷಗಳ ಸಂಘರ್ಷ ಅಂತಿಮ‌ ಹಂತಕ್ಕೆ ಬಂದಿದೆ. ರಾಮಜನ್ಮಭೂಮಿಗಾಗಿ 72 ಬಾರಿ ಸಂಘಷ೯ ನಡೆದಿದೆ, ಸುಮಾರು ಮೂರುಕಾಲು ಲಕ್ಷ ಮಂದಿ ಪ್ರಾಣತೆತ್ತಿದ್ದಾರೆ. ರಾಮನನ್ನು ಬಿಟ್ಟು ಭಾರತೀಯರು ಬದುಕಲು ಸಾಧ್ಯವಿಲ್ಲ. ರಾಮಮಂತ್ರಾಕ್ಷತೆಯನ್ನು‌ ಪ್ರತಿಯೊಂದು ಹಿಂದು‌ ಮನೆಗಳಿಗೆ ತಲುಪಿಸುವ ಗುರುತರ ಕಾರ್ಯ ನಮ್ಮ ಮೇಲಿದೆ ಎಂದರು.
ವೇದಿಕೆಯಲ್ಲಿ ರಾ.ಸ್ವ.ಸಂಘದ ಪುತ್ತೂರು ಜಿಲ್ಲಾ ಸಹಕಾರ್ಯವಾಹ ಸಂತೋಷ್ ಕಾಪಿನಡ್ಕ, ವೇಣೂರು ತಾಲೂಕು ಸಂಘಚಾಲಕ್ ರಘುನಂದನ್ ಇದ್ದರು.
ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಕಾಶ್ ಪುರೋಹಿತ್ ಸ್ವಾಗತಿಸಿದರು. ವಿಜಯಗೌಡ ವಂದಿಸಿದರು.

Related posts

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
error: Content is protected !!