24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

ಬೆಳ್ತಂಗಡಿ: ಲಕ್ಷಾಂತರ ರಾಮಭಕ್ತರ ಬಲಿದಾನ, ತ್ಯಾಗದ ಫಲವಾಗಿ ಜ.22 ರಂದು ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಯಾಗಲಿದೆ. ಆ ಪ್ರಯಕ್ತ ರಾಮಮಂತ್ರಾಕ್ಷತೆಯನ್ನು‌ ಮನೆಮನೆಗೆ ತಲುಪಿಸುವ ಕಾರ್ಯವನ್ನು ಶ್ರದ್ಧೆ, ಭಕ್ತಿ, ಪೂಜ್ಯತೆಯಿಂದ ಮಾಡೋಣ ಎಂದು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು.
ಅವರು ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಹಸ್ತಾಂತರಿಸಿ ಆಶೀರ್ವದಿಸಿದರು.


ರಾಮ ಭಾರತದ, ಭಾರತೀಯರ ಆತ್ಮ. ಧರ್ಮದ ಅಸ್ತಿತ್ವವಿದ್ದರೆ, ದೇಶ ಸುಭಿಕ್ಷವಾಗಿರುತ್ತದೆ. ರಾಮನಾಮ ಸ್ಮರಣೆಯೊಂದಿಗೆ ಹನುಮಂತನ ಜಪವನ್ನೂ ಮಾಡುತ್ತ ರಾಮಮಂತ್ರಾಕ್ಷತೆಯ ಅಪೂರ್ವ ಅಭಿಯಾನದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳೋಣ ಎಂದರು.


ರಾ.ಸ್ವ‌.ಸಂಘದ ವಿಭಾಗ ಸಾಮರಸ್ಯ ಸಂಯೋಜಕ ರವೀಂದ್ರ ಅವರು, ಕಳೆದ 495 ವರ್ಷಗಳ ಸಂಘರ್ಷ ಅಂತಿಮ‌ ಹಂತಕ್ಕೆ ಬಂದಿದೆ. ರಾಮಜನ್ಮಭೂಮಿಗಾಗಿ 72 ಬಾರಿ ಸಂಘಷ೯ ನಡೆದಿದೆ, ಸುಮಾರು ಮೂರುಕಾಲು ಲಕ್ಷ ಮಂದಿ ಪ್ರಾಣತೆತ್ತಿದ್ದಾರೆ. ರಾಮನನ್ನು ಬಿಟ್ಟು ಭಾರತೀಯರು ಬದುಕಲು ಸಾಧ್ಯವಿಲ್ಲ. ರಾಮಮಂತ್ರಾಕ್ಷತೆಯನ್ನು‌ ಪ್ರತಿಯೊಂದು ಹಿಂದು‌ ಮನೆಗಳಿಗೆ ತಲುಪಿಸುವ ಗುರುತರ ಕಾರ್ಯ ನಮ್ಮ ಮೇಲಿದೆ ಎಂದರು.
ವೇದಿಕೆಯಲ್ಲಿ ರಾ.ಸ್ವ.ಸಂಘದ ಪುತ್ತೂರು ಜಿಲ್ಲಾ ಸಹಕಾರ್ಯವಾಹ ಸಂತೋಷ್ ಕಾಪಿನಡ್ಕ, ವೇಣೂರು ತಾಲೂಕು ಸಂಘಚಾಲಕ್ ರಘುನಂದನ್ ಇದ್ದರು.
ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಕಾಶ್ ಪುರೋಹಿತ್ ಸ್ವಾಗತಿಸಿದರು. ವಿಜಯಗೌಡ ವಂದಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya
error: Content is protected !!