22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

ಬೆಳ್ತಂಗಡಿ: ಲಕ್ಷಾಂತರ ರಾಮಭಕ್ತರ ಬಲಿದಾನ, ತ್ಯಾಗದ ಫಲವಾಗಿ ಜ.22 ರಂದು ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಯಾಗಲಿದೆ. ಆ ಪ್ರಯಕ್ತ ರಾಮಮಂತ್ರಾಕ್ಷತೆಯನ್ನು‌ ಮನೆಮನೆಗೆ ತಲುಪಿಸುವ ಕಾರ್ಯವನ್ನು ಶ್ರದ್ಧೆ, ಭಕ್ತಿ, ಪೂಜ್ಯತೆಯಿಂದ ಮಾಡೋಣ ಎಂದು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು.
ಅವರು ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಹಸ್ತಾಂತರಿಸಿ ಆಶೀರ್ವದಿಸಿದರು.


ರಾಮ ಭಾರತದ, ಭಾರತೀಯರ ಆತ್ಮ. ಧರ್ಮದ ಅಸ್ತಿತ್ವವಿದ್ದರೆ, ದೇಶ ಸುಭಿಕ್ಷವಾಗಿರುತ್ತದೆ. ರಾಮನಾಮ ಸ್ಮರಣೆಯೊಂದಿಗೆ ಹನುಮಂತನ ಜಪವನ್ನೂ ಮಾಡುತ್ತ ರಾಮಮಂತ್ರಾಕ್ಷತೆಯ ಅಪೂರ್ವ ಅಭಿಯಾನದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳೋಣ ಎಂದರು.


ರಾ.ಸ್ವ‌.ಸಂಘದ ವಿಭಾಗ ಸಾಮರಸ್ಯ ಸಂಯೋಜಕ ರವೀಂದ್ರ ಅವರು, ಕಳೆದ 495 ವರ್ಷಗಳ ಸಂಘರ್ಷ ಅಂತಿಮ‌ ಹಂತಕ್ಕೆ ಬಂದಿದೆ. ರಾಮಜನ್ಮಭೂಮಿಗಾಗಿ 72 ಬಾರಿ ಸಂಘಷ೯ ನಡೆದಿದೆ, ಸುಮಾರು ಮೂರುಕಾಲು ಲಕ್ಷ ಮಂದಿ ಪ್ರಾಣತೆತ್ತಿದ್ದಾರೆ. ರಾಮನನ್ನು ಬಿಟ್ಟು ಭಾರತೀಯರು ಬದುಕಲು ಸಾಧ್ಯವಿಲ್ಲ. ರಾಮಮಂತ್ರಾಕ್ಷತೆಯನ್ನು‌ ಪ್ರತಿಯೊಂದು ಹಿಂದು‌ ಮನೆಗಳಿಗೆ ತಲುಪಿಸುವ ಗುರುತರ ಕಾರ್ಯ ನಮ್ಮ ಮೇಲಿದೆ ಎಂದರು.
ವೇದಿಕೆಯಲ್ಲಿ ರಾ.ಸ್ವ.ಸಂಘದ ಪುತ್ತೂರು ಜಿಲ್ಲಾ ಸಹಕಾರ್ಯವಾಹ ಸಂತೋಷ್ ಕಾಪಿನಡ್ಕ, ವೇಣೂರು ತಾಲೂಕು ಸಂಘಚಾಲಕ್ ರಘುನಂದನ್ ಇದ್ದರು.
ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಕಾಶ್ ಪುರೋಹಿತ್ ಸ್ವಾಗತಿಸಿದರು. ವಿಜಯಗೌಡ ವಂದಿಸಿದರು.

Related posts

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
error: Content is protected !!