24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

ನಡ: ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿಯ ವತಿಯಿಂದ ತಾಲೂಕಿನ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನ ಶಿಕ್ಷಕರ ಸಮಾಲೋಚನ ಸಭೆ ಜರಗಿತು.


ಸಭೆಯನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಮೋಹನ್ ರವರು ಉದ್ಘಾಟಿಸಿ ಮಾತನಾಡುತ್ತಾ, ಮಾಡಿ ಕಲಿ ಎಂಬ ತತ್ವದಡಿ ಮಕ್ಕಳ ಕಲಿಕೆಯನ್ನು ಸಾಧಿಸಬಹುದು. ಏನೇ ತಂತ್ರಜ್ಞಾನ ಬಂದರೂ ಕಲಿಕೆಗೆ, ಕಲಿಕಾ ವ್ಯವಸ್ಥೆಗೆ ಅದು ಪರ್ಯಾವಲ್ಲ. ಅಂತಿಮವಾಗಿ ಶಿಕ್ಷಕರೇ ಪ್ರಯೋಗಶೀಲ ಮತ್ತು ಪರಿಣಾಮಕಾರಿ ಪಾತ್ರ ನಿರ್ವಹಿಸುವವರು. ಆದ್ದರಿಂದ ಕಾರ್ಯಾಗಾರದಲ್ಲಿ ಚರ್ಚಿತ ವಿಷಯಗಳು ತರಗತಿಯ ಕೋಣೆಗೆ ಬರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗದ ರಾಮಕೃಷ್ಣ ಭಟ್ ಬೆಳಾಲು, ಮಹಮ್ಮದ್ ರಿಯಾಜ್ ಕೊಕ್ರಾಡಿ, ವಸಂತ ನಾಯ್ಕ ಪುತ್ತಿಲ, ಪೂರ್ಣಿಮಾ ಬೆಳ್ತಂಗಡಿ, ಚೈತ್ರ ಪಡಂಗಡಿ ಜಗನ್ನಾಥ ಗರುವಾಯನಕೆರೆ, ಶ್ರೀನಿವಾಸ ಎಂ ನೇಲ್ಯಡ್ಕ ಇವರು ಕಾರ್ಯಾಗಾರವನ್ನು ಸಡೆಸಿಕೊಟ್ಟರು.
ವಲಯ ಸಂಪನ್ಮೂಲ ಅಧಿಕಾರಿ ಶ್ರೀಮತಿ ಸುಜಾತಾರವರು ಶುಭಕೋರಿದರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಿಯಾಜ್, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ ಭಟ್ ಬೆಳಾಲು ಇವರಿಗೆ ಮತ್ತು ನಡ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ, ಶಾಲೆಯಲ್ಲಿ ಸಮಾಜ ವಿಜ್ಞಾನ ಪ್ರಯೋಗಾಲಯ ತೆರೆದ ಸಾಧನೆಗಾಗಿ ಶಿವಪುತ್ರ ಸುನಗಾರರವರನ್ನು ಸನ್ಮಾನಿಸಲಾಯಿತು.

ಶಿಕ್ಷಕ ಶಿವಪುತ್ರ ಸುನಗಾರ್ ಸ್ವಾಗತಿಸಿ, ಗೌರವ ಶಿಕ್ಷಕಿ ಮಿಸ್ತ್ರಿಯ ವಂದಿಸಿದರು, ಶಿಕ್ಷಕಿ ಶ್ರೀಮತಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya
error: Content is protected !!