25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

ನಡ: ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿಯ ವತಿಯಿಂದ ತಾಲೂಕಿನ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನ ಶಿಕ್ಷಕರ ಸಮಾಲೋಚನ ಸಭೆ ಜರಗಿತು.


ಸಭೆಯನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಮೋಹನ್ ರವರು ಉದ್ಘಾಟಿಸಿ ಮಾತನಾಡುತ್ತಾ, ಮಾಡಿ ಕಲಿ ಎಂಬ ತತ್ವದಡಿ ಮಕ್ಕಳ ಕಲಿಕೆಯನ್ನು ಸಾಧಿಸಬಹುದು. ಏನೇ ತಂತ್ರಜ್ಞಾನ ಬಂದರೂ ಕಲಿಕೆಗೆ, ಕಲಿಕಾ ವ್ಯವಸ್ಥೆಗೆ ಅದು ಪರ್ಯಾವಲ್ಲ. ಅಂತಿಮವಾಗಿ ಶಿಕ್ಷಕರೇ ಪ್ರಯೋಗಶೀಲ ಮತ್ತು ಪರಿಣಾಮಕಾರಿ ಪಾತ್ರ ನಿರ್ವಹಿಸುವವರು. ಆದ್ದರಿಂದ ಕಾರ್ಯಾಗಾರದಲ್ಲಿ ಚರ್ಚಿತ ವಿಷಯಗಳು ತರಗತಿಯ ಕೋಣೆಗೆ ಬರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗದ ರಾಮಕೃಷ್ಣ ಭಟ್ ಬೆಳಾಲು, ಮಹಮ್ಮದ್ ರಿಯಾಜ್ ಕೊಕ್ರಾಡಿ, ವಸಂತ ನಾಯ್ಕ ಪುತ್ತಿಲ, ಪೂರ್ಣಿಮಾ ಬೆಳ್ತಂಗಡಿ, ಚೈತ್ರ ಪಡಂಗಡಿ ಜಗನ್ನಾಥ ಗರುವಾಯನಕೆರೆ, ಶ್ರೀನಿವಾಸ ಎಂ ನೇಲ್ಯಡ್ಕ ಇವರು ಕಾರ್ಯಾಗಾರವನ್ನು ಸಡೆಸಿಕೊಟ್ಟರು.
ವಲಯ ಸಂಪನ್ಮೂಲ ಅಧಿಕಾರಿ ಶ್ರೀಮತಿ ಸುಜಾತಾರವರು ಶುಭಕೋರಿದರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಿಯಾಜ್, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ ಭಟ್ ಬೆಳಾಲು ಇವರಿಗೆ ಮತ್ತು ನಡ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ, ಶಾಲೆಯಲ್ಲಿ ಸಮಾಜ ವಿಜ್ಞಾನ ಪ್ರಯೋಗಾಲಯ ತೆರೆದ ಸಾಧನೆಗಾಗಿ ಶಿವಪುತ್ರ ಸುನಗಾರರವರನ್ನು ಸನ್ಮಾನಿಸಲಾಯಿತು.

ಶಿಕ್ಷಕ ಶಿವಪುತ್ರ ಸುನಗಾರ್ ಸ್ವಾಗತಿಸಿ, ಗೌರವ ಶಿಕ್ಷಕಿ ಮಿಸ್ತ್ರಿಯ ವಂದಿಸಿದರು, ಶಿಕ್ಷಕಿ ಶ್ರೀಮತಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya
error: Content is protected !!