July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

ಶಿಶಿಲ: ಬ್ಯಾಂಕ್ ಆಪ್ ಬರೋಡಾ ಶಿಶಿಲ ಮತ್ತು ಶಿಶಿಲ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.22 ರಂದು ಶಿಶಿಲ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ನಡೆಯಿತು.

ಶಿಶಿಲ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್‌ ಮೂಡೆತ್ತಾಯ ರವರು ಕಾರ್ಯಕ್ರಮ ಉದ್ಘಾಟಿಸಿದರು. ಶಿಶಿಲ ಪಂಚಾಯತ್ ಅಧ್ಯಕ್ಷ ಸುಧಿನ್ ಡಿ ಅಧ್ಯಕ್ಷತೆ ವಹಿಸಿದ್ದರು.

ಅಖಿಲ ಭಾರತ್ ವಿದ್ಯುತ್ ಪರಿಷತ್ ನಾಯಕ ಸುವಿತ್ ಶೆಟ್ಟಿ ಮತ್ತು ಕೊಕ್ಕಡ ಗ್ರಾ.ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನದ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಶಿಶಿಲ ಬ್ಯಾಂಕ್ ಆಪ್ ಬರೋಡದ ಪ್ರಬಂದಕರಾದ ರಾಕೇಶ್‌, ಶಿಶಿಲ ಪಂಚಾಯತ್ ನ ಉಪಾಧ್ಯಕ್ಷರಾದ ಯಶೋಧರ ಕೆ.ವಿ ಉಪಸ್ಥಿತರಿದ್ದರು.

ಸಭೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕ‌ರ್ ಗೌಡ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ.ಎಸ್‌, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್ ಕುರುಪ್, ತಾ.ಪಂ ಮಾಜಿ ಸದಸ್ಯೆ ಚೇತನ ಚಂದ್ರಶೇಖರ್, ಪಂಚಾಯತ್‌ ಸದಸ್ಯರು, ಸಿಬ್ಬಂಧಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುಮಾ ಸಂಜಯ್ ಪ್ರಾರ್ಥಿಸಿದರು. ಕರುಣಾಕರ ಶಿಶಿಲ ಸ್ವಾಗತಿಸಿದರು. ಸುಂದರ ಕೆ., ಮತ್ತು ದಿನಕರ್ ಕುರುಪ್ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಧನ್ಯವಾದವಿತ್ತರು.

Related posts

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya
error: Content is protected !!