38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

ಗುರುವಾಯನಕೆರೆ: ಇಲ್ಲಿಯ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ” ಡಿ. 23ರಿಂದ 24 ರವರೆಗೆ ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆಯಲ್ಲಿ ನಡೆಯಲಿದೆ.

ಡಿ.23 ರಂದು ಬಂಗಾಡಿ ಅರಮನೆಯ ಬಿ ಯಶೋಧರ ಬಲ್ಲಾಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅನುವಂಶಿಕ ಅರ್ಚಕ ವೆಂಕಟರಮಣ ಅಸ್ರಣ್ಣ, ಪುಂಜಾಲಕಟ್ಟೆ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರು ರಾಜವೀರ ಇಂದ್ರ, ಬೆಳ್ತಂಗಡಿಯ ವಿಕಾರ್ ಜನರಲ್ ಡಯಾಸಿಸ್ ಮತ್ತು ಅಧ್ಯಕ್ಷ REV. FR ಜೋಸೆಫ್ ವಲಿಯಪರಂಬಿಲ್, ಬಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದೈವ ನರ್ತಕ ಮತ್ತು ಧರ್ಮದರ್ಶಿ ದೇಜಪ್ಪ ಬಾಚಕೆರೆ, ಜುಮ್ಮಾ ಮಸೀದಿ ಜಾರಿಗೆಬೈಲ್ ಇಮಾಮ್ ಜಾನಬಿ ಮುಹಮ್ಮದ್ ಯಾಸಿರ್ ಫಾಜಿಲ್ ಫುರ್ಕಾನಿ ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಡಿ.24 ರಂದು ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಜಯರಾಜ್ ಅಮೀನ್, ಅಂಕೋಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಮನೋಹರ ಎಂ , ಬೆಳ್ತಂಗಡಿ ಉದ್ಯಮಿ ಶಮಂತ್ ಕುಮಾರ್ ಜೈನ್ ಬಿ., ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ನವೀನ್ ಕುಮಾರ್ ಮರೀಕೆ ತಿಳಿಸಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya
error: Content is protected !!