25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ‌ ಪರೀಕ್ಷಾ ಪೂರ್ವ ತರಬೇತಿ ಶಿಬಿರವು ಕಕ್ಕಿಂಜೆ ಸರಕಾರಿ‌ ಪ್ರೌಢ ಶಾಲೆಯಲ್ಲಿ ಜರುಗಿತು.
ಮುಖ್ಯೋಪಾಧ್ಯಾಯ ರವಿ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಹಾಜಿ ಬಿ ಶೇಕುಂಞಿ ವಹಿಸಿದ್ದರು.
ಶಿಬಿರದ ಉದ್ದೇಶ ಮತ್ತು ಮಹತ್ವದ ಬಗ್ಗೆ ಉಮರ್ ಕುಂಞಿ ನಾಡ್ಜೆ, ಮುಹಮ್ಮದ್ ಉಜಿರೆ, ಎಸ್.ಎಂ ಕೋಯಾ ಮಾತಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಯಾಕುಬ್ ನಡ, ಜಗನ್ನಾಥ್ ಮಹೇಂದ್ರ ಇವರುಗಳು ವಿದ್ಯಾರ್ಥಿಗಳಿಗೆ ಒಂದು ದಿನದ ಶಿಬಿರ ನಡೆಸಿಕೊಟ್ಟರು.
ಸದಸ್ಯರಾದ ಅಬ್ಬಾಸ್ ಎಸ್,ಕೆ ಉಪಸ್ಥಿತರಿದ್ದರು. ಶಿವ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿ, ಸಾವಿತ್ರಿ ಸ್ವಾಗತಿಸಿ, ಜಯಾ ಧನ್ಯವಾದವಿತ್ತರು.

Related posts

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya
error: Content is protected !!