ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

Updated on:

ಬೆಳ್ತಂಗಡಿ: ಮಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಡಿ.21 ರಂದು ನಡೆದಿದೆ.
ಉಜಿರೆ ಕಾಲೇಜಿನ ಸಂಸ್ಕೃತ ವಿಭಾಗದ ನಿವೃತ್ತ ಮುಖ್ಯಸ್ಥ ದಿ.ಇ.ಮಹಾಬಲ ಭಟ್ ಅವರ ಪುತ್ರ, ಕಲ್ಮಂಜ ಗ್ರಾಮದ ನಿಡಿಗಲ್ ನ ಚಂದ್ರಶೇಖರ್ ಭಟ್ (46ವ) ಮೃತ ವ್ಯಕ್ತಿಯಾಗಿದ್ದಾರೆ.
ಇವರು ರೈಲಿನಲ್ಲಿ ಗೋವಾಕ್ಕೆ ಪ್ರಯಾಣಿಸುತ್ತಿದ್ದು ಮಡ್ಗಾಂವ್ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಅವರು ಅಲ್ಲಿ ಇಳಿಯದೆ ಇರುವುದನ್ನು ಗಮನಿಸಿ ಮುಂದಿನ ವರ್ಣ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಅಲ್ಲಿನ ಪೊಲೀಸರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕುಟುಂಬಸ್ಥರು ಗೋವಾಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Leave a Comment

error: Content is protected !!