29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಪಡಂಗಡಿ: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ರೂ.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್‍ಯಕ್ರಮ ಡಿ.22 ರಂದು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ದೇವಸ್ಥಾನದ ವಠಾರದಲ್ಲಿ ದೇವರ ಪುಷ್ಕರಣಿ, ನಾಗನ ಕಟ್ಟೆ, ಸಭಾಭವನ, ಅರ್ಚಕರ ಕೊಠಡಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಕಾಶಿ ಶೆಟ್ಟಿ ನವಶಕ್ತಿ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ವಿಜಯ ಕುಮಾರ್ ಶೆಟ್ಟಿ ಮುಂಬೈ, ಸಂಪತ್ ಕುಮಾರ್ ಜೈನ್ ಪಡಂಗಡಿ, ಕಿರಾತ ಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೊರ್ಯಾರು, ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ವೆಂಕಟ್ರಾಯಮಲ್ಯ ಶಿವಗಿರಿ, ಕರುಣಾಕರ ಭಂಡಾರಿ, ಸುಮಂತ್ ಕುಮಾರ್ ಜೈನ್, ಗಂಗಾಧರ ರಾವ್ ಕೇವುಡೇಲು, ಪ್ರಶಾಂತ್ ಪಡಂಗಡಿ, ಪ್ರವೀಣ್ ಕುಮಾರ್ ಜೈನ್ ಪಾಡ್ಯಾರು, ಸುಕೇಶ್ ಕುಮಾರ್ ಕಡಂಬು, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಹಾಗೂ ಅರ್ಚಕರಾದ ರಾಘವೇಂದ್ರ ಭಟ್ ಮಠ ಮೊದಲಾದವರು ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿದರು.

Related posts

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya
error: Content is protected !!