September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ.ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ,ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಪುನಃ ಚಿರತೆ ದಾಳಿ ಮಾಡುತ್ತಿದೆ. ಕಳೆದ ರಾತ್ರಿ ಪುಣ್ಕೆದೊಟ್ಟು ಮನೆ ಕೋಳಿ ಗೂಡುವಿಕೆ ದಾಳಿ ಮಾಡಿದೆ, ನಾಯಿ,ಬೆಕ್ಕು ಕಣ್ಮರೆಯಾಗಿದ್ದು ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

Related posts

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!