April 2, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿ

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

  • ಇತ್ತೀಚಿಗೆ ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆ ಯಲ್ಲಿ ಬಿಡುಗಡೆಯಾದ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ
  • ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ
    ನಿಮಾ೯ಣ – .ಸುಂದರ ಕೇನಾಜೆ ಚಿತ್ರಕತೆ, ನಿರ್ದೇಶನ
  • ತಾಲೂಕಿನ ಕೊಯ್ಯೂರು, ಬಜಿಲ, ಬಂದಾರು, ಬೈಪಾಡಿ, ದಿಡುಪೆ, ಪುದುವೆಟ್ಟು, ಶಿರ್ಲಾಲು ಗಳಲ್ಲಿ ಚಿತ್ರೀಕರಣ

ಬೆಳ್ತಂಗಡಿ: 2024ರ ಜನವರಿ 5 ರಿಂದ 9ರ ವರೆಗೆ ಕೇರಳದ ತ್ರಿಶೂರಿನಲ್ಲಿ ನಡೆಯುವ 7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಇತ್ತೀಚಿಗೆ ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆ ಯಲ್ಲಿ ಬಿಡುಗಡೆಯಾದ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆಯಾಗಿದೆ. ವಿಕಿಪೀಡಿಯ ಫೌಂಡೇಶನ್ ತಯಾರಿಸಿದ ಈ ಸಾಕ್ಷ್ಯಚಿತ್ರದ ನಿರ್ಮಾಣವನ್ನು ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಮಾಡಿದ್ದರು. ಡಾ.ಸುಂದರ ಕೇನಾಜೆ ಚಿತ್ರಕತೆ ಬರೆದು ನಿರ್ದೇಶನ ಮಾಡಿದ್ದಾರೆ.
ತಾಲೂಕಿನ ಕೊಯ್ಯೂರು ಬಜಿಲ, ಬಂದಾರು ಬೈಪಾಡಿ ದಿಡುಪೆ, ಪುದುವೆಟ್ಟು, ಶಿರ್ಲಾಲು ಗಳಲ್ಲಿ ಚಿತ್ರೀಕರಣ ನಡೆದಿದೆ.

ಭಾರತದ ಬೇರೆಬೇರೆ ಭಾಷೆಗಳಿಂದ ಆಯ್ಕೆಯಾದ 70 ಸಾಕ್ಷ್ಯಚಿತ್ರ ಹಾಗೂ ಜಗತ್ತಿನ ಬೇರೆಬೇರೆ ದೇಶಗಳಿಂದ ಆಯ್ಕೆಯಾದ 310 ಚಲನ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಅದರಲ್ಲಿ ತುಳು ಭಾಷೆಯ ಜಾನಪದ ವಿಭಾಗದಲ್ಲಿ ಈ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ತುಳು ಭಾಷೆಯ ಏಕೈಕ ಸಾಕ್ಷ್ಯಚಿತ್ರವಾಗಿ ಅಯ್ಕೆಯಾಗಿದೆ. ಮಧ್ಯಕಾಲೀನ ಕರ್ನಾಟಕದ ರಹಸ್ಯ ತಾಂತ್ರಿಕ ಪಂಥಗಳ ಪ್ರಭಾವದಿಂದ ಇಂದಿಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಕಂಡುಬರುವ ಒಂದು ಮಹತ್ವದ ಕುಣಿತ “ಪುರ್ಸ ಕಟ್ಟುನ”. ಬೆಳ್ತಂಗಡಿ ತಾಲೂಕಿನ ಕುದುರೆಮುಖ ಘಟ್ಟದ ತಳಭಾಗದಲ್ಲಿ ಇಂದಿಗೂ ಪ್ರಚಲಿತವಿರುವ ಈ ಕುಣಿತವು ಸುಗ್ಗಿ ತಿಂಗಳ ಹುಣ್ಣಿಮೆಯ ಆಸುಪಾಸು ದಿನಗಳಲ್ಲಿ ನಡೆಯುತ್ತದೆ. ತುಳುಭಾಷೆಯನ್ನು ಮಾತನಾಡುವ ಹಲವು ಜನಾಂಗಗಳು ಒಟ್ಟು ಸೇರಿ ನಡೆಸುವ ಈ ಕುಣಿತವು ಮೂಲತಃ ಗೌಡ ಸಮುದಾಯದವರು ನಡೆಸುತ್ತಾ ಬಂದದ್ದಾಗಿದೆ. ಆಚರಣೆ, ಮನರಂಜನೆ, ನಂಬಿಕೆ, ವಿಡಂಬನೆ ಮತ್ತು ಸಮನ್ವಯದ ಭಾಗವಾಗಿ ನಡೆಯುವ ಈ ಕುಣಿತದ ಒಳತಿರುಳು ಇದರಲ್ಲಿದೆ. ಒಟ್ಟು 40 ನಿಮಿಷದ ಈ ಸಾಕ್ಷ್ಯಚಿತ್ರ ತುಳುನಾಡಿನಲ್ಲಿ ಪ್ರಚಲಿತವಿದ್ದ ತಾಂತ್ರಿಕ ಪಂಥ ಮತ್ತು ಜನಪದ ಕುಣಿತಕ್ಕೆ ಸಂಬಂಧಿಸಿದ್ದಾಗಿದೆ. ತುಳುನಾಡಿನ ಘಟನಾವಳಿ ಹಾಗೂ ವಿದ್ವಾಂಸರ ವಿಶ್ಲೇಷಣೆಯೊಂದಿಗೆ ಮೈಸೂರಿನ ಕನ್ನಡಿ ಕ್ರಿಯೇಷನ್ ತಯಾರಿಸಿದ ಈ ಸಾಕ್ಷ್ಯಚಿತ್ರ ಯೂಟ್ಯೂಬ್ ಮತ್ತು ವಿಕಿಮೀಡಿಯ ಕಾಮನ್ಸ್ ಮೂಲಕ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya
error: Content is protected !!