26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಸಾಕಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರ ಮೆಚ್ಚುಗೆ ಗಳಿಸಿದೆ.

ಪೌರ ಕಾರ್ಮಿಕರು ಬರೀ ಸ್ವಚ್ಚತೆಗೆ ಮಾತ್ರ ಸೀಮಿತವಾಗದೆ ಅವರು ನಮ್ಮಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂಬ ಸದುದ್ದೇಶದಿಂದ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರು ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ ಇತರರಿಗೆ ಮಾದರಿಯಾದರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರಾದ ಸುರೇಶ್, ಚಂದ್ರ ಬೋವಿ, ವಸಂತ, ಅಶೋಕ ಇವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಕೋರಿದರು.

ಸಂಸ್ಥೆಯ ಮಾಲಕ ಶೀತಲ್ ಜೈನ್ ಪೌರ ಕಾರ್ಮಿಕರಿಗೆ ಉಡುಗೊರೆ ನೀಡಿ ಗೌರವಿಸಿ, ಸ್ವಾಗತಿಸಿದರು. ಸಂಸ್ಥೆಯ ಪ್ರಮುಖರಾದ ಆಯಾನ್ಸ್ ಮೊಬೈಲ್ ಅರಿಹಂತ್ ಜೈನ್, ಸುಧೀರ್ ಜೈನ್ ಹಾಗೂ‌ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೌರಕಾರ್ಮಿಕರು ನಗರದ ಜೀವನಾಡಿಗಳು:

ಪೌರಕಾರ್ಮಿಕರು ಸಮಾಜದ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ. ನಗರದ ಆರೋಗ್ಯ ಹಾಗೂ ಸ್ವಚ್ಛತೆ ಪೌರ ಕಾರ್ಮಿಕರ ಕೆಲಸದ ಮೇಲೆ ನಿಂತಿದೆ. ಹೀಗಾಗಿ ಪೌರಕಾರ್ಮಿಕರು ನಗರದ ಜೀವನಾಡಿಗಳು ಎಂದು ಪವರ್ ಆನ್ ಸಂಸ್ಥೆಯ ಮಾಲಕರಾದ ಶೀತಲ್ ಜೈನ್ ಹೇಳಿದರು.

Related posts

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!