25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಸಾಕಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರ ಮೆಚ್ಚುಗೆ ಗಳಿಸಿದೆ.

ಪೌರ ಕಾರ್ಮಿಕರು ಬರೀ ಸ್ವಚ್ಚತೆಗೆ ಮಾತ್ರ ಸೀಮಿತವಾಗದೆ ಅವರು ನಮ್ಮಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂಬ ಸದುದ್ದೇಶದಿಂದ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರು ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ ಇತರರಿಗೆ ಮಾದರಿಯಾದರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರಾದ ಸುರೇಶ್, ಚಂದ್ರ ಬೋವಿ, ವಸಂತ, ಅಶೋಕ ಇವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಕೋರಿದರು.

ಸಂಸ್ಥೆಯ ಮಾಲಕ ಶೀತಲ್ ಜೈನ್ ಪೌರ ಕಾರ್ಮಿಕರಿಗೆ ಉಡುಗೊರೆ ನೀಡಿ ಗೌರವಿಸಿ, ಸ್ವಾಗತಿಸಿದರು. ಸಂಸ್ಥೆಯ ಪ್ರಮುಖರಾದ ಆಯಾನ್ಸ್ ಮೊಬೈಲ್ ಅರಿಹಂತ್ ಜೈನ್, ಸುಧೀರ್ ಜೈನ್ ಹಾಗೂ‌ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೌರಕಾರ್ಮಿಕರು ನಗರದ ಜೀವನಾಡಿಗಳು:

ಪೌರಕಾರ್ಮಿಕರು ಸಮಾಜದ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ. ನಗರದ ಆರೋಗ್ಯ ಹಾಗೂ ಸ್ವಚ್ಛತೆ ಪೌರ ಕಾರ್ಮಿಕರ ಕೆಲಸದ ಮೇಲೆ ನಿಂತಿದೆ. ಹೀಗಾಗಿ ಪೌರಕಾರ್ಮಿಕರು ನಗರದ ಜೀವನಾಡಿಗಳು ಎಂದು ಪವರ್ ಆನ್ ಸಂಸ್ಥೆಯ ಮಾಲಕರಾದ ಶೀತಲ್ ಜೈನ್ ಹೇಳಿದರು.

Related posts

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
error: Content is protected !!