September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಮಲವಂತಿಗೆ: ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಸಮಿತಿ ಕಾಜೂರು ಅಧೀನದ ರಹ್ಮಾನಿಯಾ ಶಿಕ್ಷಣ ಸಂಸ್ಥೆ ಇದರ ರಹ್ಮಾನಿಯಾ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವುದು ಹೇಗೆ? ಎಂಬುವುದರ ಕುರಿತು ವಿಶೇಷ ಕಾರ್ಯಾಗಾರ ಡಿ.22 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ತರಬೇತುದಾರ, ಶಿವಮೊಗ್ಗ ತೀರ್ಥಹಳ್ಳಿ ಸರಕಾರಿ ಕಾಲೇಜಿನ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಇಕ್ಬಾಲ್ ಮಾಚಾರ್ ರವರು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.

ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಸ್ವಾಗತಿಸಿ, ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ, ಸಂಸ್ಥೆಯ ಚೇರ್ಮೇನ್ ಹಾಗೂ ದರ್ಗಾ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಸಂಸ್ಥೆ ಕೋಶಾಧಿಕಾರಿ ಮುಹಮ್ಮದ್ ಕಮಾಲ್, ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯಿನಿ ಸಂಶಾದ್ ಸಹಿತವಿರುವ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಸ್ವಾದಿಕ್ ವಂದಿಸಿದರು.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!