September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ.ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ,ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಪುನಃ ಚಿರತೆ ದಾಳಿ ಮಾಡುತ್ತಿದೆ. ಕಳೆದ ರಾತ್ರಿ ಪುಣ್ಕೆದೊಟ್ಟು ಮನೆ ಕೋಳಿ ಗೂಡುವಿಕೆ ದಾಳಿ ಮಾಡಿದೆ, ನಾಯಿ,ಬೆಕ್ಕು ಕಣ್ಮರೆಯಾಗಿದ್ದು ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

Related posts

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಜೈವಿಕ ತಂತ್ರಜ್ಞಾನ ವಿಭಾಗದಿಂದ ಎಐ ಆಧಾರಿತ ಕಲಿಕೆಯ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
error: Content is protected !!