25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.

ಅಳದಂಗಡಿಯಲ್ಲಿ ದೈವ ದೇವರುಗಳ ಆಭರಣಗಳ ರಥಕ್ಕೆ ಹಾಗೂ ಕುಣಿತಾ ಭಜನೆಗೆ ಶಿರ್ಲಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಗುಣಮ್ಮ ಅವರು ಚಾಲನೆ ನೀಡಿದರು‌.

ಸಂಜೆ ಕುಣಿತ ಭಜನೆ, ಕೀಳು ಕುದುರೆ, ಚೆಂಡೆ ವಾದ್ಯ, ವಿವಿಧ ವೇಷ ಭೂಷಣಗಳೊಂದಿಗೆ ವೈಭವಯುತ ಅಭೂತಪೂರ್ವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ನಡೆಯಿತು.

ಶಿರ್ಲಾಲು ಬ್ರಹ್ಮ ಬೈದರ್ಕಳ ಗರಡಿ ಹತ್ತಿರ ನಡೆದ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ ದೇವರ ಆಭರಣಗಳ ಮೆರವಣಿಗೆಗಳ ಉದ್ಘಾಟನೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಶುಭ ಕೋರಿದರು.ಮುಂಬೈ ಉದ್ಯಮಿ, ದಾನಿ ಸುರೇಶ್ ಪೂಜಾರಿ ಊರ ಕಲಶಕ್ಕೆ ಭತ್ತ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರವಿರಾಜ್ ಗೌಡ,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ಒಡಿಮಾರು, ಹೊರೆಕಾಣಿಕೆ ಸಮಿತಿ ಸಂಚಾಲಕ ಪ್ರಕಾಶ್ ಕಟ್ರಬೈಲು,ಹರೀಸದ್ ಕಲಗಲಾಜೆ,ವಿಜಯ್ ಉಪಸ್ಥಿತರಿದ್ದರು.

ವಿವಿಧ ಸಮಿತಿಗಳ ಪದಾಧಿಕಾರಿಗಳು, ಊರವರು, ಭಕ್ತರು ಸಹಕರಿಸಿದರು.ಸತೀಶ್ ನೆಲ್ಲಿಗುಡ್ಡೆ ಸ್ವಾಗತಿಸಿದರು, ದೀಕ್ಷಿತ್ ಅಂಡಿಂಜೆ ನಿರೂಪಿಸಿದರು.

ಗಮನ ಸೆಳೆದ ಕುಣಿತಾ ಭಜನೆ: ಅಳದಂಗಡಿಯಿಂದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ 1500 ಕ್ಕೂ ಹೆಚ್ಚು ಭಜಕರಿಂದ ಕುಣಿತಾ ಭಜನೆ ನಡೆಯಿತು.

Related posts

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya
error: Content is protected !!