23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತ

ಲಾರಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ ಮಂಗಳೂರು ಆಸ್ಪತ್ರೆಗೆ ದಾಖಲು

ಕೊಯ್ಯುರು : ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಡಿ.21 ರಂದು ಸಂಜೆ, ಬೆಳ್ತಂಗಡಿ ಕಸಬಾ ಗ್ರಾಮದ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ, ದ್ವಿಚಕ್ರ ವಾಹನ ಕೆಎ21 ಎಸ್‌ 6354 ನೇದನ್ನು ಕೃಷ್ಣಪ್ಪ ಭಂಡಾರಿ ಎಂಬವರು ಸವಾರಿ ಮಾಡಿಕೊಂಡು ಬರುತ್ತಿದ್ದಾಗ, ಕೆಎ19ಎಬಿ7791 ನೇ ಲಾರಿಯನ್ನು ಅದರ ಚಾಲಕ ಮಹಮ್ಮದ್‌ ರಫೀಕ್‌ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಕೃಷ್ಣಪ್ಪ ಭಂಡಾರಿ ಯವರು ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ, ಕೃಷ್ಣಪ್ಪರವರು ವಾಹನದ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .

ವೆಂಕಟೇಶ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2023 ಕಲಂ: 279,338,ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
error: Content is protected !!