July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ :ರಾಜಕೇಸರಿ ಸಂಘಟನೆ ಸಮಾಜದ ಸಾವಿರಾರು ಜನರಿಗೆ ಜಾತಿ ಭೇದವಿಲ್ಲದೆ ಸಹಕಾರ ನೀಡುತ್ತಿದೆ. ಆರೋಗ್ಯ ನೆರವಿಗಾಗಿ ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ನಡೆಯುತ್ತಿರುವ ಈ ಕ್ರೀಡಾಕೂಟ ಶ್ಲಾಘನೀಯವಾದುದು. ಆಟಗಾರರು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು’ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹೇಳಿದರು.

ಅವರು ಭಾನುವಾರ ಅಖಿಲ ಕರ್ನಾಟಕ ರಾಜಕೇಶರಿ ಟ್ರಸ್ಟ್ ಬೆಳ್ತಂಗಡಿ ತಾಲ್ಲೂಕು ಇದರ ಆಶ್ರಯದಲ್ಲಿ ರಾಜಕೇಶರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಒಂದು ಬಡ ಕುಟುಂಬದ ವೈದ್ಯಕೀಯ ಶಸ್ತ್ರ ಚಿಕಿತ್ಸೆಗಾಗಿ 543 ನೇ ಸೇವಾ ಯೋಜನೆಯ ಪ್ರಯುಕ್ತ ಬೆಳ್ತಂಗಡಿ ತಾಲ್ಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿ ಮಾತನಾಡಿದರು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಉದ್ಘಾಟಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿ, ‘ ಮುದುಡಿ ಕುಳಿತ ದೇಹಕ್ಕೆ ವ್ಯಾಯಾಮ ಸಿಗುವ ಹಾಗೆ ಸಂಘಟನೆಯವರು ಮಾಡಿದ್ದಾರೆ. ನಮ್ಮ ಸಂಪಾದನೆಯ ಒಂದು ಭಾಗ ಸಮಾಜಕ್ಕೆ ನೀಡಿ ಸುಸ್ಥಿರ ಸಮಾಜ ನಿರ್ಮಿಸುವಲ್ಲಿ ರಾಜ ಕೇಸರಿ ಸಂಘಟನೆ ಮಾಡುತ್ತಿರುವ ಕಾರ್ಯ ದೇವರು ಮೆಚ್ಚುವ ಕಾರ್ಯವಾಗಿದೆ ಎಂದರು.

ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ವಿಭಾಗದ ವ್ಯವಸ್ಥಾಪಕ ಉದಯ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಬೆಳ್ತಂಗಡಿ ಗೃಹ ರಕ್ಷಕ ದಳದ ಅಧ್ಯಕ್ಷ ಜಯಾನಂದ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಅಗ್ನಿ ಶಾಮಕ ದಳದ ಉಸ್ಮಾನ್, ಪಟ್ಟಣ ಪಂಚಾಯತ್ ನ ಕರುಣಾಕರ್ ಇದ್ದರು.

ರಾಜಕೇಸರಿ ಸಂಘಟನೆಯ ಅಧ್ಯಕ್ಷ ಸಂದೀಪ್ ಅಧ್ಯಕ್ಷತೆ ವಹಿಸಿದ್ದರು.ಸಂಘಟನೆಯ ವಿಜಯ್ ಸಿಕ್ವೇರಾ ನಿರೂಪಿಸಿ ವಂದಿಸಿದರು.

Related posts

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!