25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

ಶಿಬಾಜೆ: ಅಡಿಕೆ ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವ ಸಮಯ ತಂಡವೊಂದು ತನ್ನ ಸೊಸೆಗೆ ಹಲ್ಲೆ ಮಾಡಿ ಅಡಿಕೆ ಸಹಿತ ಕಾಂಕ್ರೀಟ್ ಬೇಲಿಯ ಕಂಬಗಳನ್ನು ಬೇಲಿಯನ್ನು ದರೋಡೆ ಮಾಡಿಕೊಂಡು ಹೋಗಿರುವುದಾಗಿ ಆರೋಪಿಸಿ, ಶಿಬಾಜೆ ಗ್ರಾಮದ ಎ.ಸಿ ಎಲಿಯಮ್ಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ಡಿ.23ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಎ ಸಿ ಎಲಿಯಮ್ಮ ಕೋಂ ಟಿ ಕೆ ಮಾಥ್ಯು ನೀಡಿದ ದೂರಿನಲ್ಲಿ ಡಿ. 23 ರಂದು ಬೆಳಿಗ್ಗೆ ತನ್ನ ಸೊಸೆ ಅಡಿಕೆ ಫಸಲು ಸಂಗ್ರಹಣೆಗಾಗಿ ತೋಟಕ್ಕೆ ಹೋಗಿ ಫಸಲುಗಳನ್ನು ಗೋಣಿ ಚೀಲದಲ್ಲಿ ತುಂಬಿಸುತ್ತಿದ್ದಾಗ, ಟಿ.ಆರ್ ಮೋಹನ, ತಂಗಮಣಿ, ವಾಸು, ಲತಾ, ವಾಸು ರವರ ಮಗಳು, ವಿಶ್ವನಾಥ, ರವಿ, ರತೀಶಗೌಡ, ರಾಧಾಕೃಷ್ಣ, ಪುರಂದರ್ ರಾವ್, ಸುರೇಶ್ ಎನ್.ಕೆ., ಲತಿಕ, ರೇಖ, ಸುಧಾಕರ, ಆನಂದ ಗೌಡ ಬಿನ್ ಲಿಂಗಪ್ಪ ಗೌಡ, ಗಂಗಾಧರ, ಮಹೇಶ್ ಪೂಜಾರಿ, ರಾಜೇಶ್, ನವೀನ್ ನೆರಿಯ, ಪ್ರಭನ್ ಯಾನೆ ಪ್ರಭಾಕರ ಎಂಬವರುಗಳು ವಾಹನಗಳಲ್ಲಿ ಬಂದು, ಸೊಸೆಯನ್ನು ಸುತ್ತುವರಿದು, ಹಲ್ಲೆ ಮಾಡಿ, ಜಮೀನಿಗೆ ಹಾಕಿದ ಬೇಲಿಯನ್ನು ಪುಡಿ ಮಾಡಿ, ಸೊಸೆಯನ್ನು ಬೆದರಿಸಿ, ಸುಮಾರು ಹತ್ತರಷ್ಟು ಕಾಂಕ್ರೀಟ್ ಬೇಲಿಯ ಕಂಬಗಳನ್ನು ಅವರು ತಂದಿದ್ದ ಟೆಂಪೋದಲ್ಲಿ ಹಾಗೂ ಸುಮಾರು 20 ಕೆಜಿಯಷ್ಟು ಬೇಲಿಯನ್ನು ಕಾರಿನಲ್ಲಿ ಹಾಗೂ ಒಂದು ಗೋಣಿ ಅಡಿಕೆಯ ಫಸಲನ್ನು ರತೀಶ್ ಗೌಡರ ಕಾರಿನಲ್ಲಿ ದರೋಡೆ ಮಾಡಿಕೊಂಡು ಹೋಗಿರುತ್ತಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ ೧೧೩/೨೦೨೩ ಕಲಂ: ೧೪೩, ೧೪೭, ೩೪೧, ೩೨೩, ೪೨೭, ೩೯೫, ಜೊತೆಗೆ ೧೪೯ ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!