September 6, 2026
ಅಪರಾಧ ಸುದ್ದಿ

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

ಶಿಬಾಜೆ: ಅಡಿಕೆ ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವ ಸಮಯ ತಂಡವೊಂದು ತನ್ನ ಸೊಸೆಗೆ ಹಲ್ಲೆ ಮಾಡಿ ಅಡಿಕೆ ಸಹಿತ ಕಾಂಕ್ರೀಟ್ ಬೇಲಿಯ ಕಂಬಗಳನ್ನು ಬೇಲಿಯನ್ನು ದರೋಡೆ ಮಾಡಿಕೊಂಡು ಹೋಗಿರುವುದಾಗಿ ಆರೋಪಿಸಿ, ಶಿಬಾಜೆ ಗ್ರಾಮದ ಎ.ಸಿ ಎಲಿಯಮ್ಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ಡಿ.23ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಎ ಸಿ ಎಲಿಯಮ್ಮ ಕೋಂ ಟಿ ಕೆ ಮಾಥ್ಯು ನೀಡಿದ ದೂರಿನಲ್ಲಿ ಡಿ. 23 ರಂದು ಬೆಳಿಗ್ಗೆ ತನ್ನ ಸೊಸೆ ಅಡಿಕೆ ಫಸಲು ಸಂಗ್ರಹಣೆಗಾಗಿ ತೋಟಕ್ಕೆ ಹೋಗಿ ಫಸಲುಗಳನ್ನು ಗೋಣಿ ಚೀಲದಲ್ಲಿ ತುಂಬಿಸುತ್ತಿದ್ದಾಗ, ಟಿ.ಆರ್ ಮೋಹನ, ತಂಗಮಣಿ, ವಾಸು, ಲತಾ, ವಾಸು ರವರ ಮಗಳು, ವಿಶ್ವನಾಥ, ರವಿ, ರತೀಶಗೌಡ, ರಾಧಾಕೃಷ್ಣ, ಪುರಂದರ್ ರಾವ್, ಸುರೇಶ್ ಎನ್.ಕೆ., ಲತಿಕ, ರೇಖ, ಸುಧಾಕರ, ಆನಂದ ಗೌಡ ಬಿನ್ ಲಿಂಗಪ್ಪ ಗೌಡ, ಗಂಗಾಧರ, ಮಹೇಶ್ ಪೂಜಾರಿ, ರಾಜೇಶ್, ನವೀನ್ ನೆರಿಯ, ಪ್ರಭನ್ ಯಾನೆ ಪ್ರಭಾಕರ ಎಂಬವರುಗಳು ವಾಹನಗಳಲ್ಲಿ ಬಂದು, ಸೊಸೆಯನ್ನು ಸುತ್ತುವರಿದು, ಹಲ್ಲೆ ಮಾಡಿ, ಜಮೀನಿಗೆ ಹಾಕಿದ ಬೇಲಿಯನ್ನು ಪುಡಿ ಮಾಡಿ, ಸೊಸೆಯನ್ನು ಬೆದರಿಸಿ, ಸುಮಾರು ಹತ್ತರಷ್ಟು ಕಾಂಕ್ರೀಟ್ ಬೇಲಿಯ ಕಂಬಗಳನ್ನು ಅವರು ತಂದಿದ್ದ ಟೆಂಪೋದಲ್ಲಿ ಹಾಗೂ ಸುಮಾರು 20 ಕೆಜಿಯಷ್ಟು ಬೇಲಿಯನ್ನು ಕಾರಿನಲ್ಲಿ ಹಾಗೂ ಒಂದು ಗೋಣಿ ಅಡಿಕೆಯ ಫಸಲನ್ನು ರತೀಶ್ ಗೌಡರ ಕಾರಿನಲ್ಲಿ ದರೋಡೆ ಮಾಡಿಕೊಂಡು ಹೋಗಿರುತ್ತಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ ೧೧೩/೨೦೨೩ ಕಲಂ: ೧೪೩, ೧೪೭, ೩೪೧, ೩೨೩, ೪೨೭, ೩೯೫, ಜೊತೆಗೆ ೧೪೯ ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya
error: Content is protected !!