23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

ಶಿಬಾಜೆ: ಅಡಿಕೆ ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವ ಸಮಯ ತಂಡವೊಂದು ತನ್ನ ಸೊಸೆಗೆ ಹಲ್ಲೆ ಮಾಡಿ ಅಡಿಕೆ ಸಹಿತ ಕಾಂಕ್ರೀಟ್ ಬೇಲಿಯ ಕಂಬಗಳನ್ನು ಬೇಲಿಯನ್ನು ದರೋಡೆ ಮಾಡಿಕೊಂಡು ಹೋಗಿರುವುದಾಗಿ ಆರೋಪಿಸಿ, ಶಿಬಾಜೆ ಗ್ರಾಮದ ಎ.ಸಿ ಎಲಿಯಮ್ಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ಡಿ.23ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಎ ಸಿ ಎಲಿಯಮ್ಮ ಕೋಂ ಟಿ ಕೆ ಮಾಥ್ಯು ನೀಡಿದ ದೂರಿನಲ್ಲಿ ಡಿ. 23 ರಂದು ಬೆಳಿಗ್ಗೆ ತನ್ನ ಸೊಸೆ ಅಡಿಕೆ ಫಸಲು ಸಂಗ್ರಹಣೆಗಾಗಿ ತೋಟಕ್ಕೆ ಹೋಗಿ ಫಸಲುಗಳನ್ನು ಗೋಣಿ ಚೀಲದಲ್ಲಿ ತುಂಬಿಸುತ್ತಿದ್ದಾಗ, ಟಿ.ಆರ್ ಮೋಹನ, ತಂಗಮಣಿ, ವಾಸು, ಲತಾ, ವಾಸು ರವರ ಮಗಳು, ವಿಶ್ವನಾಥ, ರವಿ, ರತೀಶಗೌಡ, ರಾಧಾಕೃಷ್ಣ, ಪುರಂದರ್ ರಾವ್, ಸುರೇಶ್ ಎನ್.ಕೆ., ಲತಿಕ, ರೇಖ, ಸುಧಾಕರ, ಆನಂದ ಗೌಡ ಬಿನ್ ಲಿಂಗಪ್ಪ ಗೌಡ, ಗಂಗಾಧರ, ಮಹೇಶ್ ಪೂಜಾರಿ, ರಾಜೇಶ್, ನವೀನ್ ನೆರಿಯ, ಪ್ರಭನ್ ಯಾನೆ ಪ್ರಭಾಕರ ಎಂಬವರುಗಳು ವಾಹನಗಳಲ್ಲಿ ಬಂದು, ಸೊಸೆಯನ್ನು ಸುತ್ತುವರಿದು, ಹಲ್ಲೆ ಮಾಡಿ, ಜಮೀನಿಗೆ ಹಾಕಿದ ಬೇಲಿಯನ್ನು ಪುಡಿ ಮಾಡಿ, ಸೊಸೆಯನ್ನು ಬೆದರಿಸಿ, ಸುಮಾರು ಹತ್ತರಷ್ಟು ಕಾಂಕ್ರೀಟ್ ಬೇಲಿಯ ಕಂಬಗಳನ್ನು ಅವರು ತಂದಿದ್ದ ಟೆಂಪೋದಲ್ಲಿ ಹಾಗೂ ಸುಮಾರು 20 ಕೆಜಿಯಷ್ಟು ಬೇಲಿಯನ್ನು ಕಾರಿನಲ್ಲಿ ಹಾಗೂ ಒಂದು ಗೋಣಿ ಅಡಿಕೆಯ ಫಸಲನ್ನು ರತೀಶ್ ಗೌಡರ ಕಾರಿನಲ್ಲಿ ದರೋಡೆ ಮಾಡಿಕೊಂಡು ಹೋಗಿರುತ್ತಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ ೧೧೩/೨೦೨೩ ಕಲಂ: ೧೪೩, ೧೪೭, ೩೪೧, ೩೨೩, ೪೨೭, ೩೯೫, ಜೊತೆಗೆ ೧೪೯ ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya
error: Content is protected !!