25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ನ ವಠಾರ ಉಜಿರೆಯಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಡಿ.24 ರಂದು ನಡೆಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವಾರ್ಷಿಕ ವರದಿಯನ್ನು ವಾಚಿಸಿದರು.ಸಂಘದ ಕೋಶಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಲೆಕ್ಕಪತ್ರ ಮಂಡನೆ ಮಾಡಿದರು. ಸಂಘಕ್ಕೆ ಹೊಸದಾಗಿ ಆಯ್ಕೆಯಾದ ನೂತನ ಸಮಿತಿಯ ಸದಸ್ಯರನ್ನು ಹೂ ಕೊಟ್ಟು ಗೌರವಿಸಲಾಯಿತು. ಶ್ರೀ ಸುರೇಶ್ ಗೌಡ ಕೂಡಿಗೆ,

ಕಾಲಭೈರವೇಶ್ವರ ಒಕ್ಕಲಿಗ ಸಹಕಾರಿ ಸಂಘದ ಅಧ್ಯಕ್ಷರಾದ ರಂಜನ್ ಜಿ ಗೌಡ ಮಾತನಾಡಿ ಸಂಘದ ಅಭಿವೃದ್ಧಿಗೆ ಸಮಾಜ ಭಾಂದವರೆಲ್ಲರ ಸಹಕಾರ ಇದೆ.ಮುಂದೆಯೂ ಅಭಿವೃದ್ಧಿ ಕಾರ್ಯಗಳತ್ತ ಶ್ರಮ ವಹಿಸಬೇಕು ಈ ಮೂಲಕ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸಂಘಟನೆಯನ್ನು ಇನ್ನಷ್ಟು ಪ್ರಬಲಗೊಳಿಸುವಲ್ಲಿ ಸಕ್ರಿಯರಾಗಬೇಕೆಂದು ಪ್ರೇರಣೆ ನೀಡಿದರು.

ಸಭಾಧ್ಯಕ್ಷತೆಯತೆಯನ್ನು ಬಾಲಕೃಷ್ಣ ಗೌಡ ಕೇರಿಮಾರು ವಹಿಸಿ ಮಾತನಾಡಿ ಸಂಘವು ನಡೆದು ಬಂದ ಪರಿಶ್ರಮ ಸಂಘಟನೆಯಲ್ಲಿ ಶ್ರಮ ಪಟ್ಟ ಗಣ್ಯರನ್ನು ಸ್ಮರಿಸುತ್ತಾ ಮುಂದಿನ ದಿನಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು. ನಮ್ಮ ಸಂಪಾದನೆಯಲ್ಲಿ ಕಿಂಚಿತ್ತು ಸಮಾಜಕ್ಕೆ ಸಮರ್ಪಸುವುದರಿಂದ ಅಭಿವೃದ್ಧಿಗೆ ಸಹಕರಿಯಾಗುತ್ತದೆ. ಮುಂದೆ ಸಾಧಿಸಬೇಕಾದುದು ಬಹಳಷ್ಟು ಇದೆ. ಮುಂದೆ ಸಹಕಾರದ ಅನುದಾನ ಪಡೆದು ಒಕ್ಕಲಿಗ ಸಮುದಾಯ ಭವನ ಕಟ್ಟಡದ ಶಿಲಾನ್ಯಾಸದ ಯೋಜನೆಯನ್ನು ತಿಳಿಸಿದರು.

ವಿಜಯ ಗೌಡ ಕಲ್ಲಲಿಕೆ, ಧರ್ಮರಾಜ ಗೌಡ ಅಡ್ಕಡಿ ಇವರು ಸಂಘದ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದರು

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಶಿವಕಾಂತ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಒಕ್ಕಲಿಗ ಗೌಡ ಯುವ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಅನುಪಮಾ ಸತೀಶ್ ಗೌಡ ದಾಮೋದರ ಗೌಡ ಸುರುಳಿ ಹಾಗೂ ಶ್ರೀಮತಿ ಸೌಮ್ಯಲ ತ ಜಯಂತ ಗೌಡ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಾಲಕೃಷ್ಣ ಗೌಡ ಕಲ್ಲಾಜೆ ಇವರು ಉಪಸ್ಥಿತರಿದ್ದರು.

ಶ್ರೀಮತಿ ಮಮತಾ ಶಿವರಾಮ ಗೌಡ ಹಾಗೂ ಅನುಪಮಾ ಸತೀಶ್ ಗೌಡ ಇವರು ಪ್ರಾರ್ಥನೆ ಹಾಡಿದರು. ವಾರಿಜ ಸುಂದರ ಗೌಡ ಇಚ್ಚಿಲ ಸ್ವಾಗತಿಸಿದರು,ಭರತ್ ಗೌಡ ಹಾನಿಬೆಟ್ಟು ಧನ್ಯವಾದವಿತ್ತರು. ಪ್ರಮೋದ್ ಗೌಡ ಅಲೆಕ್ಕಿ ಮತ್ತು ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!