July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಡಿ.25ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಬೆಳಾಲು ಪೇಟೆಯಿಂದ ಮೆರವಣಿಗೆಯೊಂದಿಗೆ ಹಸಿರುವಾಣಿ ಸಮರ್ಪಣೆ, ನಡೆಯಿತು.

ಬಳಿಕ ಅನಂತಪದ್ಮನಾಭ ಮಹಿಳಾ ಕುಣಿತಾ ಭಜನಾ ತಂಡ ಮತ್ತು ಶ್ರೀ ಅನಂತೇಶ್ವರ ಭಜನಾ ಮಂಡಳಿಯಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೀ ನಾಗ ದೇವರಿಗೆ – ಕಲಶಾಭಿಷೇಕ, ತನು ಸಮರ್ಪಣೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ ಮಧ್ಯಾಹ್ನ ಮಹಾ ಪೂಜೆ, ಅನ್ನ ಸಂತರ್ಪಣೆ, ಊರವರಿಂದ ಶ್ರೀ ಮಹಾ ವಿಷ್ಣುಯಾಗ, ವಿಷ್ಣು. ಸಹಸ್ರ ನಾಮ ಪಾರಾಯಣ ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ವಿಜಯ ಕುಮಾರ್ ಕೊಡಿಯಾಲ್‌ ಬೈಲ್ ನಿರ್ದೇಶನದಲ್ಲಿ ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ದೇವಸ್ಥಾನದ ಆಡಳಿತ ಮೊಕ್ತಸರ ಜೀವಂದರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ ಗೌಡ ಅರಣೆಮಾರು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ವಿದ್ಯಾ ಶ್ರೀನಿವಾಸ್ ಉಪಸ್ಥಿತರಿದ್ದರು.

Related posts

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

Suddi Udaya

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya
error: Content is protected !!