ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಡಿ.25ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಬೆಳಾಲು ಪೇಟೆಯಿಂದ ಮೆರವಣಿಗೆಯೊಂದಿಗೆ ಹಸಿರುವಾಣಿ ಸಮರ್ಪಣೆ, ನಡೆಯಿತು.

ಬಳಿಕ ಅನಂತಪದ್ಮನಾಭ ಮಹಿಳಾ ಕುಣಿತಾ ಭಜನಾ ತಂಡ ಮತ್ತು ಶ್ರೀ ಅನಂತೇಶ್ವರ ಭಜನಾ ಮಂಡಳಿಯಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೀ ನಾಗ ದೇವರಿಗೆ – ಕಲಶಾಭಿಷೇಕ, ತನು ಸಮರ್ಪಣೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ ಮಧ್ಯಾಹ್ನ ಮಹಾ ಪೂಜೆ, ಅನ್ನ ಸಂತರ್ಪಣೆ, ಊರವರಿಂದ ಶ್ರೀ ಮಹಾ ವಿಷ್ಣುಯಾಗ, ವಿಷ್ಣು. ಸಹಸ್ರ ನಾಮ ಪಾರಾಯಣ ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ವಿಜಯ ಕುಮಾರ್ ಕೊಡಿಯಾಲ್‌ ಬೈಲ್ ನಿರ್ದೇಶನದಲ್ಲಿ ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ದೇವಸ್ಥಾನದ ಆಡಳಿತ ಮೊಕ್ತಸರ ಜೀವಂದರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ ಗೌಡ ಅರಣೆಮಾರು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ವಿದ್ಯಾ ಶ್ರೀನಿವಾಸ್ ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya
error: Content is protected !!