ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿಯ 2023/24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ ಇವರು ಅಧಿಕಾರ ಸ್ವೀಕರಿಸಿದರು.

ಬೆಂಜನಪದವಿನಲ್ಲಿ ನಡೆದ ಪದಪ್ರದಾನ ಕಾರ್ಯಕ್ರಮದಲ್ಲಿ ಕಲಕೆದ ಬಾರಿಯ ಅಧ್ಯಕ್ಷ ರಾಜೇಶ್ ಅವರು ಹರೀಶ್ ಪೂಜಾರಿಯವರಿಗೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.

ಹರೀಶ್ ಪೂಜಾರಿಯವರು ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾಗಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಸದಸ್ಯರಾಗಿ, ಲಯನ್ಸ್ ಕ್ಲಬ್ ಘಟಕದ ಅದ್ಯಕ್ಷರಾಗಿ ಹಾಗೂ ಪ್ರಸ್ತುತ ಬಳಂಜ ಶ್ರೀ ಧರ್ಮರಸು ಶ್ರೀ ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಬೊಂಟ್ರೋಟ್ಟುಗುತ್ತು ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Comment

error: Content is protected !!