23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಯಲ್ಲಿ ಡಿ.26 ರಂದು ದೂರು ನೀಡಲಾಯಿತು.
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿಘಟಕ ಅಧ್ಯಕ್ಷರಾದ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸದಸ್ಯರಾದ ಅಡ್ವೋಕೇಟ್ ಅಸ್ಮಾ, ಸೌದ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya
error: Content is protected !!